newsics.com
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಭಾರೀ ಅನಾಹುತಗಳು ಸಂಭವಿಸುತ್ತಿವೆ. ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಈ ದುಂರತ ಸಂಭವಿಸಿದೆ. ಮನೆ ಮೇಲೆ ಗುಡ್ಡ ಕುಸಿದು ಐವರು ಸಿಲುಕಿಕೊಂಡಿದ್ದಾರೆ.
ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಪರಿಣಾಮ ಅವಶೇಷಗಳಡಿ ಐವರು ಸಿಲುಕಿದ್ದಾರೆ. ಓರ್ವ ವ್ಯಕ್ತಿ ಅವಶೇಷಗಳಡಿಯಿಂದ ಹೊರಬಂದು ಬಚಾವಾಗಿದ್ದಾರೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಮಣ್ಣಿನಡಿ ಸಿಲುಕಿದ್ದು, ಹೊರಬರಲಾಗದೇ ಪರದಾಡುತ್ತಿದ್ದು, ರಕ್ಷಣೆಗಾಗಿ ಸ್ಥಳೀಯರು, ಎಸ್ ಡಿ ಆರ್ ಎಫ್ ತಂಡ ಹರಸಾಹಸ ಪಡುತ್ತಿದೆ.