
ಕಾನ್ಪುರ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಗಿದಿಲ್ಲ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.
ಬಿಹಾರದ ಕಾನ್ಪುರದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಶತ್ರುಗಳು ಎಲ್ಲೇ ಇದ್ದರೂ ಶತ್ರುವನ್ನು ಸೋಲಿಸಲಾಗುವುದು. . ಆಪರೇಷನ್ ಸಿಂಧೂರ್ ಅನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿದ್ದಕ್ಕಾಗಿ ಪ್ರಧಾನಿ ಮೋದಿ ಭಾರತೀಯ ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದರು. ನಾವು ಭಯೋತ್ಪಾದಕರ ಶಿಬಿರಗಳಿಗೆ ನುಗ್ಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ತಾಣಗಳನ್ನು ನಾಶಪಡಿಸಿದ್ದೇವೆ. ನಮ್ಮ ಸಶಸ್ತ್ರ ಪಡೆಗಳು ಎಷ್ಟು ಧೈರ್ಯವನ್ನು ತೋರಿಸಿದವು ಎಂದರೆ ಪಾಕಿಸ್ತಾನ ಸೇನೆಯು ಯುದ್ಧವನ್ನು ನಿಲ್ಲಿಸುವಂತೆ ಬೇಡಿಕೊಂಡಿತು. ಆಪರೇಷನ್ ಸಿಂಧೂರ್ ಸಮಯದಲ್ಲಿ ನಮ್ಮನ್ನು ನಿಲ್ಲಿಸುವಂತೆ ಬೇಡಿಕೊಂಡ ಶತ್ರುಗಳಿಗೆ ನಾನು ಒಂದು ಮಾತು ಹೇಳಬಯಸುತ್ತೇನೆ. ನೀವು ಮೋಸ ಹೋಗಬೇಡಿ, ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ ಎಂದು ಪಾಕಿಸ್ತಾನಕ್ಕೆ ಮೋದಿ ಎಚ್ಚರಿಸಿದ್ದಾರೆ.