newsics.com
ಹಾಸನ : ಮಾಲೀಕನನ್ನು ಕೊಲೆ ಮಾಡಿ ಆತನ ಮೈಮೇಲಿದ್ದ ಚಿನ್ನವನ್ನು ದೋಚಿ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.5
ಅರಸೀಕೆರೆ ನಗರದ ಸುಬ್ರಹ್ಮಣ್ಯ ನಗರ ಬಡಾವಣೆ ಯ ನಿವಾಸಿ ವಿಜಯ್ ಕುಮಾರ್(46) ಎನ್ನುವರನ್ನು ಕಾರ್ಮಿಕರು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಅರಸೀಕೆರೆ ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ಡಿಪೋ ಮುಂಭಾಗದಲ್ಲಿ ಕಾಂಟ್ರಕ್ಟರ್ ವಿಜಯ್ ಕುಮಾರ್ ಬಳಿ ಕೆಲಸ ಮಾಡುತಿದ್ದರು.
ಕೊಲೆ ಮಾಡಿದ ಬಳಿಕ ವಿಜಯ್ ಮೈಮೇಲಿದ್ದ ಬಂಗಾರದ ಚಿನ್ನ ಹಾಗೂ ಕೈನಲ್ಲಿದ್ದ ಉಂಗುರಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ಅಚ್ಚರಿ ಅಂದ್ರೆ ಉಂಗುರು ತೆಗೆಯಲು ಬರಲಿಲ್ಲವೆಂದು ಕೈ ಬೆರಳನ್ನೇ ಕಟ್ ಮಾಡಿಕೊಂಡು ಕೊಂಡೊಯ್ದಿದ್ದಾರೆ.
ಈ ಸಂಬಂಧ ಪತ್ನಿ ಹಾಗೂ ಮಕ್ಕಳನ್ನು ಊರಿನಲ್ಲಿ ಬಿಟ್ಟು ಮತ್ತೋರ್ವ ಸ್ನೇಹಿತನನ್ನು ಕರೆದುಕೊಂಡು ಬಂದಿದ್ದ. ಬಂದು ಒಂದು ವಾರದಲ್ಲಿ ನೆಪವೊಂದನ್ನು ಹೇಳಿ ವಿಜಯ್ ಕುಮಾರ್ ನನ್ನು ಫೋನ್ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡು ಹತ್ಯೆ ಮಾಡಿದ್ದಾರೆ. ಬಳಿಕ ವಿಜಯ್ ಮೈಮೇಲಿದ್ದ ಚಿನ್ನದ ಸರ, ಉಂಗುರ ಹಾಗೂ ಹಣ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಕೊಲೆ ಕೇಸ್ ದಾಖಲು ಮಾಡಿ, ಪೋಲಿಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.