newsics.com
ಬೆಂಗಳೂರು: ಮಳೆ ಅವಾಂತರಗಳನ್ನು ನಿಯಂತ್ರಿಸಲು ಬಿಬಿಎಂಪಿ ಡ್ರೋನ್ ಮೊರೆಹೋಗಲು ಮುಂದಾಗಿದೆ.
ಬೆಂಗಳೂರಿನಲ್ಲಿ ಮಳೆ ಬಂದಾಗ ಜಲಾವೃತ ಆಗುವ ಪ್ರದೇಶಗಳು ಹಾಗೂ ಮಳೆಹಾನಿ ಪ್ರದೇಶಗಳಲ್ಲಿ ಡ್ರೋನ್ ಹಾರಿಸಿ ಮಾಹಿತಿ ಕಲೆ ಹಾಕಲು ಸಿದ್ಧತೆ ನಡೆಸಿದೆ.
ಸದ್ಯ ಪೊಲೀಸ್ ಇಲಾಖೆಯ ಜೊತೆ ಸೇರಿ ಡ್ರೋನ್ ಕಾರ್ಯಾಚರಣೆ ಮೂಲಕ ಮಳೆ ಹಾನಿ ಪ್ರದೇಶಗಳ ಪತ್ತೆಗೆ ಚಿಂತನೆ ನಡೆಸಲಾಗಿದೆ. ಡ್ರೋನ್ ಹಾರಾಟ ನಿರ್ವಹಣೆಗೆ ಪೊಲೀಸ್ ಹಾಗೂ ಬಿಬಿಎಂಪಿಯ ಅಧಿಕಾರಿಗಳ ತಂಡದಿಂದ ನೋಡಲ್ ಆಫೀಸರ್ಗಳನ್ನು ನೇಮಿಸಲಾಗಿದೆ. ಮಳೆ ಬಂದಾಗ ಯಾವ್ಯಾವ ಪ್ರದೇಶಗಳಲ್ಲಿ ಹಾನಿಯಾಗುತ್ತದೆ ಎಂಬುದನ್ನು ಡ್ರೋನ್ ಮೂಲಕ ಬಿಬಿಎಂಪಿಯ ಕಂಟ್ರೋಲ್ ರೂಮ್ನಲ್ಲಿ ಕುಳಿತುಕೊಂಡೇ ಮಾಹಿತಿ ಕಲೆಹಾಕಲು ಉದ್ದೇಶಿಸಲಾಗಿದೆ. ಇದರಿಂದ, ಎಲ್ಲಿ ಸಮಸ್ಯೆಯಾಗಿದೆ ಎಂಬುದನ್ನು ಪತ್ತೆಹಚ್ಚಿ ಸೂಕ್ತ ಸಮಯಕ್ಕೆ ನೆರವು ನೀಡುವುದಕ್ಕೆ ಅನುಕೂಲವಾಗಲಿದೆ.
ಮತ್ತೊಂದೆಡೆ, ಗುಂಡಿಗಳು, ನೀರು ನಿಲ್ಲುವ ಜಾಗ ಸರಿಪಡಿಸದೇ ಬೋಟ್, ಡ್ರೋನ್ ಎಂದು ಕತೆ ಹೇಳುತ್ತಿರುವ ಪಾಲಿಕೆ ನಡೆಗೆ ನಗರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೇಗಿರಲಿದೆ ಡ್ರೋನ್ ಕಾರ್ಯಾಚರಣೆ?
- ಮಳೆ ಅವಾಂತರ ಆಗಿರೋ ಜಾಗದ ಬಗ್ಗೆ ಮಾಹಿತಿ ಸಂಗ್ರಹ.
- ಮಳೆ ನೀರು ಇರೋ ಕಡೆ ಡ್ರೋನ್ ಹಾರಿಸಲಿರುವ ತಂಡ.
- ಡ್ರೋನ್ ಹಾರಾಟದ ದೃಶ್ಯಗಳು ಬಿಬಿಎಂಪಿಯ ಕಂಟ್ರೋಲ್ ರೂಮ್ನಲ್ಲಿ ಡಿಸ್ಪ್ಲೇ.
- ಜಲಾವೃತವಾದ ಜಾಗದಲ್ಲಿ ಎಲ್ಲಿ ನೀರು ಹರಿಯಲು ಜಾಗ ಇದೆ ಎಂಬುದನ್ನು ಗುರುತಿಸಲಾಗುತ್ತದೆ.
- ಅವಾಂತರ ಆದ ಜಾಗಕ್ಕೆ ಏನು ಕ್ರಮ ಕೈಗೊಳ್ಳಬೇಕು ಎಂಬುದರ ರೂಪುರೇಷೆ ಸಿದ್ಧತೆ.
- ರಕ್ಷಣಾ ಕಾರ್ಯಾಚರಣೆ, ನೀರು ತೆರವು ಕಾರ್ಯಾಚರಣೆಗೆ ಕ್ರಮ ರೂಪಿಸಲು ಪ್ಲಾನ್.
India Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಇಂದು ಶುದ್ಧ ಚಿನ್ನದ ಬೆಲೆ ಎಷ್ಟಿದೆ?