newsics.com
ಬೆಂಗಳೂರು: ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಕ್ಷಮೆ ಕೇಳಲ್ಲವೆಂದು ಉದ್ಧಟತನ ಮೆರೆದಿದ್ದ ನಟ ಕಮಲ್ ಹಾಸನ್ಗೆ ಹೈಕೋರ್ಟ್ ಭಾರೀ ಚಾಟಿ ಬೀಸಿದೆ.
ಮೊದಲು ಕನ್ನಡಿಗರ ಕ್ಷಮೆ ಕೇಳಿ. ಆಮೇಲೆ ಅರ್ಜಿ ವಿಚಾರಣೆ ಮಾಡುವುದಾಗಿ ಕರ್ನಾಟಕ ಹೈಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ.
ಥಗ್ ಲೈಫ್ ಸಿನಿಮಾ ಬಿಡುಗಡೆ ನಿರ್ಬಂಧವನ್ನು ತೆರವು ಮಾಡುವಂತೆ ಕಮಲ್ ಹಾಸನ್ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆಗೊಳಪಡಿಸಿದೆ.
ಮೊದಲು ಕನ್ನಡಿಗರ ಕ್ಷಮೆ ಕೇಳಿ, ನಂತರವೇ ಅರ್ಜಿ ವಿಚಾರಣೆ ನಡೆಸುತ್ತೇವೆ ಎಂದು ಹೈಕೋರ್ಟ್ ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.
ಕಮಲ್ ಹಾಸನ್ ಯಾರೇ ಇರಲಿ, ನೆಲ- ಜಲ ವಿಚಾರದಲ್ಲಿ ರಾಜಿ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾ.ನಾಗ ಪ್ರಸನ್ನ ಅವರು, ಯಾವುದೋ ಭಾಷೆಯಿಂದ ಕನ್ನಡ ಹುಟ್ಟಿದೆ ಎಂದರೆ ಹೇಗೆ? ಇಂದಿನ ಪರಿಸ್ಥಿತಿಗೆ ಕಮಲ್ ಹಾಸನ್ ನೇರ ಕಾರಣ. ಮೊದಲು ಆ ಬಗ್ಗೆ ಕ್ಷಮೆ ಕೇಳಿ. ಬಳಿಕ ನಿಮ್ಮ ಅರ್ಜಿಯನ್ನು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಸಿನಿಮಾ ಬಿಡುಗಡೆಗೆ ತೊಂದರೆ ಆಗುತ್ತದೆ ಎಂದು ಅರ್ಜಿ ಹಾಕಿದ್ದೀರಿ. ನನಗೆ ತಲೆಯಲ್ಲಿ ಬುದ್ಧಿ ಇಲ್ಲದೇ ಆ ರೀತಿ ಮಾತನಾಡಿದೆ ಎಂದು ಕನ್ನಡಿಗರ ಕ್ಷಮೆ ಕೇಳಿ. ಈ ಹಿಂದೆ ರಾಜಗೋಪಾಲಾಚಾರಿ ಕ್ಷಮೆ ಕೇಳಿದ್ದರು. ಬಳಿಕ ಪರಿಸ್ಥಿತಿ ತಣ್ಣಗಾಯ್ತು ಎಂದು ನ್ಯಾಯಮೂರ್ತಿ ಕಮಲ್ ಹಾಸನ್ಗೆ ಮಾತಿನ ಚಾಟಿ ನೀಡಿದರು.
ಥಗ್ ಲೈಫ್ ಸಿನಿಮಾ ಪ್ರಚಾರದ ವೇಳೆ ಕಮಲ್ಹಾಸನ್ ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎಂಬ ಅಸಂಬದ್ಧ ಹೇಳಿಕೆ ನೀಡಿದ್ದರು. ಇದಕ್ಕೆ ಕನ್ನಡಿಗರು ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಜೆ ಕಾರಣವಾಗಿ, ಥಗ್ ಲೈಫ್ ಸಿನಿಮಾ ಬಿಡುಗಡೆಗೆ ನಿಷೇಧ ಬೆದರಿಕೆ ಹಾಕಿತ್ತು.
Ghaati ಕೊನೆಗೂ ಸಿಕ್ತು ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ಗೆ ಬಿಡುಗಡೆ ಭಾಗ್ಯ; ರಿಲೀಸ್ ಯಾವಗ?
Astro| Birth secrets ಹುಟ್ಟಿದ ಸಮಯದಲ್ಲಡಗಿದೆ ನಿಮ್ಮ ವ್ಯಕ್ತಿತ್ವ… ನೀವು ಜನಿಸಿದ ವೇಳೆ ಯಾವುದು? ನೀವೆಂಥವರು?