newsics.com
ಬೆಂಗಳೂರು: ಸತತ 18 ವರ್ಷಗಳ ನಿರೀಕ್ಷೆಯ ನಂತರ ಆರ್ಸಿಬಿ ತಂಡವು ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಮೊದಲ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದ ಸಂಭ್ರಮದಲ್ಲಿ ಬೆಂಗಳೂರಿನ ಕ್ರಿಕೆಟ್ ಅಭಿಮಾನಿಗಳು ಇದ್ದರು. ಇದೇ ವೇಳೆ ವಿಜಯೋತ್ಸವವನ್ನು ಆಚರಿಸಲು ಲಕ್ಷಾಂತರ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನೆರೆದಿದ್ದರು. ಆ ವೇಳೆ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.
ಇದೇ ವೇಳೆ ಮತ್ತೊಂದು ಘಟನೆ ನಡೆದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವ್ಯಕ್ತಿಯೊಬ್ಬನಿಗೆ ಬಡಿದು ಕಾಲ್ ಹಿಡಿದು ನೂಕಿದ್ದಾರೆ. ಇದು ಅಧಿಕಾರದ ದರ್ಪ, ಇಂತಹ ನಡೆ ಕಳವಳಕಾರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತವಾಗಿದೆ.
ಇದೇ ವೇಳೆ ಡಿ.ಕೆ ಶಿವಕುಮಾರ್ ಅವರ ದುರಹಂಕಾರ ಮತ್ತು ಆಘಾತಕಾರಿ ನಡೆಯನ್ನು ಪ್ರದರ್ಶಿಸಿದ್ದಾರೆ ಎಂದು @karnatakaportf ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಸಂಭ್ರಮಾಚರಣೆ, ವಿಜಯಯಾತ್ರೆ ಹಮ್ಮಿಕೊಳ್ಳಲಾಯಿತು. ಕೊನೆಗೆ ವಿಜಯಯಾತ್ರೆ ಕೈ ಬಿಟ್ಟು, ಆಟಗಾರರಿಗೆ ಸನ್ಮಾನ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಕ್ಕೆ ಅವಕಾಶ ಮಾಡಿಕೊಡಲಾಯಿತು. ಇದೆಲ್ಲವನ್ನು ಸ್ವತಃ ಡಿಕೆ ಶಿವಕುಮಾರ್ ಅವರು ಉಸ್ತುವಾರಿಗಳಂತೆ ಓಡಾಡಿ ನೋಡಿಕೊಂಡರು.
https://x.com/karnatakaportf/status/1930449891458986220