newsics.com
ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ರಕ್ಷಿಸಿದ ನಗರಸಭಾ ಸದಸ್ಯನೇ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿ ಪ್ರಾಣಾಪಾಯಕ್ಕೆ ಸಿಲುಕಿದ ಘಟನೆಗ ಕೊಡವೂರಿನಲ್ಲಿ ನಡೆದಿದೆ.
ಬಾಚನಬೈಲಿನ ಕುಟುಂಬದ ಮನೆ ಸುತ್ತ ಪ್ರವಾಹ ಏರಿದ್ದು, ಮಕ್ಕಳು ಜೀವಭಯದಿಂದ ಕೂಗುತ್ತಿದ್ದಾರೆ ಎಂಬ ಮಾಹಿತಿ ತಿಳಿದು ನಗರಸಭಾ ಸದಸ್ಯ ವಿಜಯ ಕೊಡವೂರು ಸ್ಥಳಕ್ಕೆ ಧಾವಿಸಿದರು. ಹಗ್ಗವೊಂದನ್ನು ವ್ಯವಸ್ಥೆ ಮಾಡಿ ಸ್ವತಃ ವಿಜಯ ಅವರೇ ಹೊಳೆಗಿಳಿದರು. ಮೊದಲಿಬ್ಬರು ಮಕ್ಕಳನ್ನು ನಂತರ ಗಂಡ, ಹೆಂಡತಿಯನ್ನು ಈಚೆ ದಡಕ್ಕೆ ಕರೆ ತಂದರು.
ಬಳಿಕ ಆಚೆ ದಡಕ್ಕೆ ತೆರಳಿ ಮರಕ್ಕೆ ಕಟ್ಟಿದ್ದ ಹಗ್ಗವನ್ನು ಬಿಚ್ಚಿ, ಇನ್ನೇನು ಈಚೆ ದಡಕ್ಕೆ ಬರುತ್ತಿದ್ದಾಗ ಪ್ರವಾಹದ ಸೆಳೆತಕ್ಕೆ ಸಿಲುಕಿ ನೀರಲ್ಲಿ ಮುಳುಗಿ ಕೊಚ್ಚಿಕೊಂಡು ಹೋದರು.
ಅದೃಷ್ಟವಶಾತ್ ವಿಜಯ ಅವರ ಕೈಗೆ ನೀರಿನಲ್ಲಿ ಕೊಚ್ಚಿಕೊಂಡು ಬಂದ ಹಗ್ಗ ಸಿಕ್ಕಿತು. ತಕ್ಷಣ ಅದನ್ನೇ ಗಟ್ಟಿಯಾಗಿ ಹಿಡಿದು ಹರಸಾಹಸಪಟ್ಟು ದಡ ಸೇರಿದ ಘಟನೆ ಭಾನುವಾರ ನಡೆದಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ, ಜು.12ರವರೆಗೂ ಮಳೆ ಮುಂದುವರಿಕೆ
ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ಕಾಮುಕನ ಬಂಧನ, ಪೊಲೀಸರ ಪ್ರಶ್ನೆಗೆ ಉಡಾಫೆ ಉತ್ತರ!