newsics.com
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಎಲ್ಲೆಡೆ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ ಸಾವಿಗೆ ಕೈ ನಾಯಕರೇ ಹೊಣೆ ಎಂದು ವಿರೋಧ ಪಕ್ಷದ ನಾಯಕರು ಆರೋಪ ಮಾಡ್ತಿದ್ದಾರೆ. ಇದೀಗ ಸಿಎಂ, ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಸಿಟ್ಟಾಗಿದ್ದಾರೆ ಎನ್ನಲಾಗ್ತಿದೆ.
ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದರು ಎನ್ನುವ ಮಾಹಿತಿ ಹೊರಬಿದ್ದಿದೆ.
ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಕಾರಿನಲ್ಲಿ ಬಾವುಟ ಹಿಡಿದು ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಹೋಗಿದ ಬಗೆಯನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ನೀವ್ಯಾಕ್ರೀ ಹೆಚ್ಎಎಲ್ ನಿಲ್ದಾಣಕ್ಕೆ ಹೋಗಿದ್ರಿ? ಆಟಗಾರನ್ನು ಯಾಕೆ ಸ್ವಾಗತ ಮಾಡಿದ್ರಿ ಎಂದು ಸಿಎಂ ಕೇಳಿದ್ದಾರೆ.
ಈ ಬಗ್ಗೆ ಪ್ರೋಟೋಕಾಲ್ ಇತ್ತಾ? ಅಧಿಕಾರಿಗಳನ್ನ ನಿಯೋಜಿಸಿಸಲಾಗಿತ್ತು. ನೀವ್ಯಾಕೆ ಅಲ್ಲಿಗೆ ಹೋಗಬೇಕಿತ್ತು ಎಂದು ಡಿಕೆ ಶಿವಕುಮಾರ್ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ರು ಎನ್ನಲಾಗ್ತಿದೆ.