ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂಗಳಿಗೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು.
ಜೂನ್ 4 ರಂದು ಆರ್ಸಿಬಿ ಚಿನ್ನಸ್ವಾಮಿ ಮೈದಾನದಲ್ಲಿ ವಿಕ್ಟರಿ ಪರೇಡ್ ಇಟ್ಟುಕೊಂಡಿತ್ತು. ಇದನ್ನು ವೀಕ್ಷಿಸಲು ಲಕ್ಷಾಂತರ ಆರ್ಸಿಬಿ ಅಭಿಮಾನಿಗಳು ಬಂದಿದ್ದರು. ಆಗ ನೂಕು, ನುಗ್ಗಲು ಸಂಭವಿಸಿ ಭೀಕರ ಕಾಲ್ತುಳಿತ ಸಂಭವಿಸಿತ್ತು.
ಈ ದುರಂತದಲ್ಲಿ ಒಟ್ಟು 11 ಆರ್ಸಿಬಿ ಅಭಿಮಾನಿಗಳು ಜೀವ ಕಳೆದುಕೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು