newsics.com
ಬಾಗಲಕೋಟೆ: ಮಳೆಯಿಂದ ಜಮಖಂಡಿ ಬಸ್ ನಿಲ್ದಾಣದೊಳಗೆ ನೀರು ನುಗ್ಗಿದ್ದು ಪ್ರಯಾಣಿಕರು ಪರದಾಡಿದರು. ನಿಲ್ದಾಣದೊಳಗೆ ನೀರು ನುಗ್ಗಿದ್ದರಿಂದ ಪ್ರಯಾಣಿಕರು ನೀರಿನಲ್ಲೇ ನಿಂತು ಬಸ್ಗಾಗಿ ಕಾದಿದ್ದಾರೆ.
ಕರ್ನಾಟಕದಲ್ಲಿ ಕ್ಷೀಣಿಸಿರುವ ಮುಂಗಾರು ಮತ್ತೆ ಚುರುಕಾಗಿ ಜೂ.11ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 9ರಿಂದಲೇ ಮತ್ತೆ ಮಳೆಯಾಗಲಿದ್ದು, ಜೂನ್ 11ರಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.