newsics.com
ಚಿತ್ರದುರ್ಗ: ಎರಡನೇ ಮದುವೆ ಆಗಲು ಮುಂದಾಗಿದ್ದ ಪತಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ.
4 ವರ್ಷದ ಹಿಂದೆ ತನುಜಾ ಎಂಬಾಕೆಯನ್ನ ಆರೋಪಿ ಕಾರ್ತಿಕ್ ಮದುವೆಯಾಗಿದ್ದ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ ತನುಜಾ, ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ ನಾಯ್ಕ್ನನ್ನು ಕೈಹಿಡಿದಿದ್ದಳು.
ಹೀಗಿದ್ದೂ ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ. ಈ ವಿಚಾರ ಹೇಗೋ ಮೊದಲ ಪತ್ನಿಯ ಕಿವಿಗೆ ಬಿದ್ದಿದೆ. ಸುದ್ದಿ ತಿಳಿದು ಕುಟುಂಬಸ್ಥರೊಂದಿಗೆ ಮಂಟಪಕ್ಕೇ ಬಂದು ಧರ್ಮದೇಟು ಕೊಟ್ಟಿದ್ದಾಳೆ. ಆ ಮೂಲಕ ಕಾರ್ತಿಕ್ ಪತ್ನಿ ತನುಜಾ ಕುಟುಂಬಸ್ಥರಿಂದ ಎರಡನೇ ಮದುವೆ ಮುರಿದು ಬಿದ್ದಿದೆ.