Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ
ಕರ್ನಾಟಕ

ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ

Share
1 Min Read
SHARE

newsics.com

ಮಂಗಳೂರು: ಯುವಕನೊಬ್ಬ ಅನುಚಿತವಾಗಿ ವರ್ತಿಸಿ ಶ್ರೀಕ್ಷೇತ್ರಕ್ಕೆ ಅಪಚಾರವೆಸಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇಗುಲಗಳಲ್ಲಿ ಒಂದಾದ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ನಡೆದಿದೆ.

ಮಂಗಳೂರಿನ ಕದ್ರಿ ಶ್ರೀಮಂಜುನಾಥೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಈ ಕೃತ್ಯ ನಡೆದಿದೆ. ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದ ಯುವಕ, ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಾನೆ ಎನ್ನಲಾಗಿದೆ.

ಅಣ್ಣಪ್ಪ ಪಂಜುರ್ಲಿ ಗುಡಿಯ ಮುಂದೆ ಹೋಗಿ ಬಾಗಿಲಿಗೆ ಕಾಲಿನಿಂದ ಒದ್ದು ಅಪಚಾರ ಮಾಡಿದ್ದಾನೆ ಎಂದು ಹೇಳಲಾಗಿದೆ.

ಈ ವೇಳೆ ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿ ಹುಚ್ಚಾಟ ಮೆರೆದಿದ್ದು, ಬಳಿಕ ದೈವಸ್ಥಾನದ ಬಳಿ ಇದ್ದ ದೈವದ ಕತ್ತಿಯನ್ನು ಕೈಗೆತ್ತಿಕೊಂಡು ರಾದ್ಧಾಂತ ನಡೆಸಿದ್ದಾನೆ.

ಈ ವೇಳೆ ಸ್ಥಳದಲ್ಲಿದ್ದವರು ಯುವಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಖಾಸಗಿ ಆಸ್ಪತ್ರೆ ಸೆಕ್ಯೂರಿಟಿ ಸಿಬ್ಬಂದಿ ಸುಧಾಕರ ಆಚಾರ್ಯ ಎಂಬಾತ ಮಹಾಪೂಜೆ ವೇಳೆ ದೇವಾಲಯದಲ್ಲಿ ಈ ರೀತಿಯ ದಾಂಧಲೆ ನಡೆಸಿದ್ದಾನೆ.

ಈತ ದೇವಾಲಯ ಒಳಾಂಗಣಕ್ಕೆ ಬೈಕ್ ತಂದು ಅಣ್ಣಪ್ಪ ಪಂಜುರ್ಲಿಯ ಕತ್ತಿ(ಕಡ್ಸಲೆ) ತೆಗೆದು ದಾಂಧಲೆ ಮಾಡಿದ್ದಾನೆ.

ದೇವಾಲಯದ ಸೆಕ್ಯುರಿಟಿ ಇದ್ದರೂ ಒಳಾಂಗಣಕ್ಕೆ ಬೈಕ್ ತಂದು, ಅಣ್ಣಪ್ಪ ದೈವದ ಗುಡಿಯೊಳಗೆ ನುಗ್ಗಿ ಮಂಟಪದ ಮೇಲೆ ಹತ್ತಿ ದಾಂಧಲೆ ಮಾಡಿದ್ದಾನೆ ಎನ್ನಲಾಗಿದೆ.

ಅಣ್ಣಪ್ಪ ದೈವದ ಕಡ್ಸಲೆ ಮುಟ್ಟಿದ ಹಿನ್ನೆಲೆಯಲ್ಲಿ ದೇಗುಲದಲ್ಲಿ ಶುದ್ಧೀಕರಣ ಮಾಡಲಾಗಿದೆ. ಈ ಹಿಂದೆಯೂ ಸುಧಾಕರ ಆಚಾರ್ಯ ಬೇರೆ ಎರಡು ಮೂರು ದೇವಾಲಯಗಳಿಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ ಎನ್ನಲಾಗಿದ್ದು, ಈತ ದೇವಾಲಯದ ಆವರಣದೊಳಗೆ ಬೈಕ್ ತಂದ ವೇಳೆ ಭಕ್ತರಿಗೂ ಗಾಯಗಳಾಗಿವೆ ಎಂದು ದೇವಲಯದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಕದ್ರಿ ಪೊಲೀಸ್ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ನೀಡಿದ್ದು, ಹುಚ್ಚಾಟ ಮೆರೆದ ಯುವಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಂಪಾಟ ಮಾಡಿದ ಯುವಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ‌ ಕೆಲಸ ನಿರ್ವಹಿಸುತ್ತಿದ್ದಾನೆ ಎನ್ನಲಾಗಿದೆ.

ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ

ಎದೆ ಹಾಲಿನ ಬ್ಯಾಂಕ್ ಮುಚ್ಚಿಸಿದ ಮುಸ್ಲಿಂ ಧರ್ಮ ಗುರುಗಳು

ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌

  ಮಂಗಳೂರು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧಿಸಿದ ಖಾಕಿ

TAGGED:misbehavior at Kadri shrine: Youth in police custodyRampage
Share This Article
Facebook Twitter Copy Link Print
Previous Article ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ
Next Article ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?