newsics.com
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಈ ಈ ಸಂಬಂಧ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಈ ಬಂಧನದಿಂದ ಬಿಡುಗಡೆ ಕೋರಿ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿ ಕೋರ್ಟ್, ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ತಮ್ಮನ್ನು ಬಂಧಿಸಿದ ಪೊಲೀಸರ ಕ್ರಮ ಕಾನೂನು ಬಾಹಿರವಾಗಿದ್ದು, ಕೂಡಲೆ ಬಿಡುಗಡೆ ಮಾಡಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ನಾಲ್ವರು ಆರ್ಸಿಬಿ ಸಿಬ್ಬಂದಿ ಸಲ್ಲಿಸಿದ್ದರು. ಆರ್ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ, ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ನ ನಿರ್ದೇಶಕ ಸುನೀಲ್ ಮ್ಯಾಥ್ಯೂ, ಡಿಎನ್ಎ ಮ್ಯಾನೇಜರ್ ಕಿರಣ್ ಕುಮಾರ್ ಮತ್ತು ಸಮಂತ್ ಮಾವಿನಕೆರೆ ತಕರಾರು ಅರ್ಜಿ ಸಲ್ಲಿಸಿದ್ದರು.
ನಿಖಿಲ್ ಸೊಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ ಮತ್ತು ಶಮಂತ್ ಈ ನಾಲ್ವರಿಗೂ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನಾಲ್ವರಿಗೂ ಮಧ್ಯಂತರ ಜಾಮೀನು ನೀಡಿದೆ. ಆರ್ ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೊಸಲೆ, ಡಿಎನ್ಎ ಉಪಾಧ್ಯಕ್ಷ ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ ಮತ್ತು ಶಮಂತ್ ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಇದರ ಜೊತೆಗೆ ದೇಶ ಬಿಟ್ಟು ಹೋಗದಂತೆ ಸೂಚನೆ ನೀಡಿದ್ದು, ನಾಲ್ವರು ಆರೋಪಿಗಳ ಪಾಸ್ ಪೋರ್ಟ್ ಸರೆಂಡರ್ ಮಾಡಲು ಆದೇಶ ಹೊರಡಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಆದೇಶ ಹೊರಡಿಸಿದ್ದಾರೆ