ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದ್ದು ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಸೇರಿದಂತೆ ಹಲವರು 242 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಈ ಅಪಘಾತ ಮೃತಪಟ್ಟವರ ಕುಟುಂಬಗಳಿಗೆ ಟಾಟಾ ಗ್ರೂಪ್ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದೆ.
ಇಂದು ಮಧ್ಯಾಹ್ನ ಅಹಮದಾಬಾದ್’ನ ಮೇಘನಾನಿಗರ್ ಪ್ರದೇಶದಲ್ಲಿ ಒಂದು ದೊಡ್ಡ ವಿಮಾನ ಅಪಘಾತ ಸಂಭವಿಸಿದೆ. ಲಂಡನ್’ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ AI-171 ಟೇಕ್ ಆಫ್ ಆದ ಕೆಲವೇ ನಿಮಿಷಗಳ ನಂತ್ರ ಇದ್ದಕ್ಕಿದ್ದಂತೆ ಹತ್ತಿರದ ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ವಿಮಾನವು ತುಂಬಾ ಕೆಳಮಟ್ಟದಲ್ಲಿ ಹಾರುತ್ತಿತ್ತು ಮತ್ತು ನೇರವಾಗಿ ಐದು ಅಂತಸ್ತಿನ ಕಟ್ಟಡಗಳಿಗೆ ಡಿಕ್ಕಿ ಹೊಡೆದಿದೆ, ಇದರಿಂದಾಗಿ ಆ ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. ಅಪಘಾತವು ಹತ್ತಿರದ ಅನೇಕ ಕಟ್ಟಡಗಳಿಗೆ ತೀವ್ರ ಹಾನಿಯನ್ನುಂಟು ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ