newsics.com
ಉಡುಪಿ: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಬುಧವಾರ ವಿವಿಧೆಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಮುಂಜಾಗ್ರತ ಕ್ರಮವಾಗಿ ಕೊಡಗು, ಚಿಕ್ಕಮಗಳೂರು, ಉಡುಪಿ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲೆಗಳಿಗೆ ಶುಕ್ರವಾರ ದಂದು (ಜೂ.13) ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಉಡುಪಿ ಜಿಲ್ಲೆಯಲ್ಲಿ ಜೂ.12 ರಿಂದ 15ರವರೆಗೆ ಭಾರತೀಯ ಹವಾಮಾನ ಇಲಾಖೆಯು “ರೆಡ್ ಅಲರ್ಟ್’ ಘೋಷಣೆ ಮಾಡಿದೆ. ಜೂ.12 ರಂದು (ಗುರುವಾರ) ರಜೆ ಘೋಷಣೆ ಮಾಡಲಾಗಿತ್ತು. ವಿವಿಧೆಡೆ ಭಾರೀ ಮಳೆ ಸುರಿದಿದ್ದು ಪ್ರವಾಹ ಭೀತಿ ಎದುರಾಗಿದೆ.
.