newsics.com
ನವದೆಹಲಿ: ಸರ್ಕಾರಿ ಸೇವೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಅಮಿತಾಭ್ ಕಾಂತ್ ಅವರು ಸೋಮವಾರ ಭಾರತದ G20 ಶೆರ್ಪಾ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
‘ನನ್ನ ಹೊಸ ಪ್ರಯಾಣ’ ಎಂಬ ಶೀರ್ಷಿಕೆಯ ಲಿಂಕ್ಡ್ಇನ್ ಪೋಸ್ಟ್ನಲ್ಲಿ ಅಮಿತಾಬ್ ಕಾಂತ್ ಹೀಗೆ ಹೇಳಿದ್ದಾರೆ…. “45 ವರ್ಷಗಳ ಸಮರ್ಪಿತ ಸರ್ಕಾರಿ ಸೇವೆಯ ನಂತರ, ನಾನು ಹೊಸ ಅವಕಾಶಗಳನ್ನು ಸ್ವೀಕರಿಸಲು ಮತ್ತು ಜೀವನದಲ್ಲಿ ಅಧ್ಯಾಯವನ್ನು ಆರಂಭಿಸಲು ನಿರ್ಧರಿಸಿದ್ದೇನೆ.
1980ರ ಬ್ಯಾಚ್ನ ನಿವೃತ್ತ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯಾಗಿರುವ ಅಮಿತಾಬ್ ಕಾಂತ್ ಅವರನ್ನು ಭಾರತ ‘ಜಿ–20’ ಅಧ್ಯಕ್ಷತೆಯನ್ನು ವಹಿಸಿಕೊಳ್ಳುವ ಕೆಲವೇ ತಿಂಗಳುಗಳ ಮುನ್ನ (2022ರ ಜುಲೈ) ಭಾರತದ ಜಿ–20 ಶೆರ್ಪಾ ಆಗಿ ನೇಮಿಸಲಾಗಿತ್ತು.