newsics.com
ಆಂಧ್ರಪ್ರದೇಶ: ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಮರಕ್ಕೆ ಕಟ್ಟಿ ಥಳಿಸಿರುವ ಘಟನೆ ಆಂಧ್ರದ ಚಿತ್ತೂರಿನಲ್ಲಿ ನಡೆದಿದೆ.
ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಪ್ರತಿನಿಧಿಸುವ ಕ್ಷೇತ್ರದಲ್ಲೇ ಈ ಅಮಾನವೀಯ ಕೃತ್ಯ ನಡೆದಿದೆ. ಗಂಡ 80,000 ಸಾವಿರ ಸಾಲದ ಹಣ ವಾಪಸ್ ನೀಡದೆ ಊರು ಬಿಟ್ಟು ಹೋಗಿದ್ದಾನೆ. ಇದಕ್ಕೆ ಶ್ರೀಶಾ ಎಂಬ ಮಹಿಳೆಯನ್ನು ಮರಕ್ಕೆ ಕಟ್ಟಿದ ದುರುಳರು ಅವಮಾನ ಮಾಡಿದ್ದಾರೆ.
ಗಂಡ ಊರು ಬಿಟ್ಟು ಹೋದ ಮೇಲೆ ಶ್ರೀಶಾಳೇ ಇಬ್ಬರು ಮಕ್ಕಳನ್ನು ಸಾಕುತ್ತಿದ್ದಾರೆ. ಸಂತ್ರಸ್ತ ಮಹಿಳೆಯ ದೂರಿನ ಮೇರೆಗೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಚಂದ್ರಬಾಬು ನಾಯ್ಡು ಅವರು ಚಿತ್ತೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿ ಆರೋಪಿಗಳಾದ ಮುನಿಕಣ್ಣಪ್ಪ, ಶ್ರೀಕಾಂತ್ ವಿರುದ್ಧ ಕ್ರಮ ಜರುಗಿಸಲು ಸೂಚಿಸಿದ್ದಾರೆ.