newsics.com
ಬೆಂಗಳೂರು:ಮರದ ಕೊಂಬೆ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದ ಯುವಕ ಅಕ್ಷಯ್ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ.
ಜೂನ್ 15 ಮರದ ಕೊಂಬೆ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಅಕ್ಷಯ್ ಕೊನೆಯುಸಿರೆಳೆದಿದ್ದಾರೆ. ಅವರ ಎರಡು ಕಣ್ಣುಗಳನ್ನು ಕಿಮ್ಸ್ ಆಸ್ಪತ್ರೆಯಲ್ಲಿ ದಾನ ಮಾಡಲಾಗಿದೆ.
ಅಕ್ಷಯ್ ಮೂಲತಃ ಬನಶಂಕರಿಯ ಕತ್ರಿಗುಪ್ಪೆಯ ಶ್ರೀನಗರದ ನಿವಾಸಿ. ರಾಜಾಜಿನಗರದ ಖಾಸಗಿ ಕಂಪನಿವೊಂದರಲ್ಲಿ ಹೆಚ್.ಆರ್. ಕೆಲಸ ಮಾಡ್ತಿದ್ದ. ಇಡೀ ಕುಟುಂಬದ ಆಧಾರ ಸ್ತಂಭವಾಗಿದ್ದ. ತಾನೇ ದುಡಿದು ಇಡೀ ಕುಟುಂವನ್ನ ಸಾಕ್ತಿದ್ದ. ಆದ್ರೆ ಇದ್ದ ಒಬ್ಬ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣಿರು ಹಾಕುತ್ತಿದ್ದಾರೆ.