Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೈದಾನದಲ್ಲೇ ತಾಳ್ಮೆ‌ ಕಳೆದುಕೊಂಡ ಇರ್ಫಾನ್ ಪಠಾಣ್- ಯೂಸುಫ್ ಪಠಾಣ್, ವೈರಲ್ ವಿಡಿಯೋ ನೋಡಿ
ಪ್ರಮುಖವಿದೇಶವೈರಲ್

ಮೈದಾನದಲ್ಲೇ ತಾಳ್ಮೆ‌ ಕಳೆದುಕೊಂಡ ಇರ್ಫಾನ್ ಪಠಾಣ್- ಯೂಸುಫ್ ಪಠಾಣ್, ವೈರಲ್ ವಿಡಿಯೋ ನೋಡಿ

Share
2 Min Read
SHARE

newsics.com

ನವದೆಹಲಿ: ಟೀಂ ಇಂಡಿಯಾದಲ್ಲಿ ಇರ್ಫಾನ್ ಪಠಾಣ್ ಹಾಗೂ ಯೂಸುಫ್ ಪಠಾಣ್ ರಾಮ ಲಕ್ಷ್ಮಣರೆಂದೇ ಖ್ಯಾತರು.

ಈ ಜೋಡಿ ಹಲವು ಬಾರಿ ಜತೆಯಾಗಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಮೈದಾನದೊಳಗೆ ಇದ್ದಾಗಲೂ ಹಾಗೂ ಮೈದಾನದಾಚೆ ಕೂಡ ಒಬ್ಬರನ್ನೊಬ್ಬರು ಗೌರವಿಸಿಕೊಳ್ಳುತ್ತಾರೆ.

ಆದರೀಗ ಈ ಇಬ್ಬರು ಕ್ರಿಕೆಟ್‌ ಸಹೋದರರು ವರ್ಲ್ಡ್‌ ಚಾಂಪಿಯನ್‌ಶಿಪ್ ಅಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಸೌಥ್ ಆಫ್ರಿಕಾ ಚಾಂಪಿಯನ್ಸ್ ಎದುರಿನ ಪಂದ್ಯದಲ್ಲಿ ಮೈದಾನದಲ್ಲಿಯೇ ತಾಳ್ಮೆ ಕಳೆದುಕೊಂಡ ಅಪರೂಪದ ಘಟನೆ ನಡೆದಿದೆ.

ದಕ್ಷಿಣ ಆಫ್ರಿಕಾ ಚಾಂಪಿಯನ್ಸ್ ಎದುರಿನ ಪಂದ್ಯದಲ್ಲಿ ಡೇಲ್ ಸ್ಟೇಯ್ನ್ ಎಸೆದ 19ನೇ ಓವರ್‌ನಲ್ಲಿ ಇರ್ಫಾನ್ ಪಠಾಣ್ ಲೋಪ್ಟೆಡ್ ಶಾಟ್ ಬಾರಿಸಿದರು. ಈ ವೇಳೆ ಎರಡನೇ ರನ್ ಪಡೆಯುವ ಯತ್ನದಲ್ಲಿ ಇರ್ಫಾನ್ ಹಾಗೂ ಯೂಸುಫ್ ನಡುವೆ ಗೊಂದಲ ಉಂಟಾದ್ದರಿಂದ ಇರ್ಫಾನ್ ಪಠಾಣ್ ರನೌಟ್ ಆಗಿ ಪೆವಿಲಿಯನ್ ಸೇರಿದರು.

ಇರ್ಫಾನ್ ಪಠಾಣ್, ಅನಾಯಾಸವಾಗಿ ಎರಡನೇ ರನ್ ಪಡೆಯುವ ಯತ್ನ ನಡೆಸಿದರು. ಆದರೆ ಯೂಸುಫ್ ಪಠಾಣ್ ಕೊಂಚ ತಡಬಡಾಯಿಸಿದ್ದರಿಂದ ಅನಾವಶ್ಯಕವಾಗಿ ಇರ್ಫಾನ್ ಪಠಾಣ್ ರನೌಟ್ ಆಗುವ ಮೂಲಕ ವಿಕೆಟ್ ಕೈಚೆಲ್ಲಿದರು.

ಇರ್ಫಾನ್ ಪಠಾಣ್ ಔಟ್ ಆಗುತ್ತಿದ್ದಂತೆಯೇ ತಾಳ್ಮೆ ಕಳೆದುಕೊಂಡು ಸಹೋದರ ಯೂಸುಫ್ ಪಠಾಣ್ ಅವರ ಮೇಲೆ ರೇಗಾಡಿದರು. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆದರೆ, ಆ ಹೊತ್ತಿಗಾಗಲೇ ಆ ಪಂದ್ಯವನ್ನು ದಕ್ಷಿಣ ಆಫ್ರಿಕಾ ಗೆದ್ದಾಗಿತ್ತು. ಮೊದಲು ಬ್ಯಾಟ್ ಮಾಡಿದ್ದ ದಕ್ಷಿಣ ಆಫ್ರಿಕಾ ಚಾಂಪಿಯನ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 210 ರನ್ ಬಾರಿಸಿತ್ತು.

ಭಾರತ ತಂಡವು ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಕನಿಷ್ಠ 153 ರನ್ ಬಾರಿಸಬೇಕಿತ್ತು. ಭಾರತ ತಂಡವು ಅಂತಿಮವಾಗಿ 6 ವಿಕೆಟ್ ಕಳೆದುಕೊಂಡು 156 ರನ್ ಗಳಿಸುವ ಮೂಲಕ ಪಂದ್ಯ ಸೋತರೂ, ಸೆಮಿಫೈನಲ್‌ಗೆ ಅರ್ಹತೆ ಪಡೆಯಿತು.

ದೊಡ್ಡ ಮೊತ್ತ ಬೆನ್ನತ್ತಿದ ಇಂಡಿಯಾ ಚಾಂಪಿಯನ್ಸ್ ತಂಡವು 11.3 ಓವರ್‌ಗಳಲ್ಲಿ 77 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ 5 ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು. ಆದರೆ ಕೊನೆಯಲ್ಲಿ ಯೂಸುಫ್ ಪಠಾಣ್ ಅಜೇಯ 54 ಹಾಗೂ ಇರ್ಫಾನ್ ಪಠಾಣ್ 35 ರನ್ ಸಿಡಿಸುವ ಮೂಲಕ ತಂಡ ಸೆಮೀಸ್‌ಗೆ ಅರ್ಹತೆ ಪಡೆಯುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು.

Irfan Pathan is furious litterly.pic.twitter.com/s0OyDJ3mOT

— Manoj Tiwari (@ManojTiwariIND) July 11, 2024

ಪುರುಷರನ್ನು ಬೈದು, ಅವಮಾನಿಸಿ ತಿಂಗಳಿಗೆ ಕೋಟಿ ಕೋಟಿ ಸಂಪಾದಿಸ್ತಾಳೆ ಈ ಮಹಿಳೆ!

ಉತ್ತರಕಾಂಡ ಫಸ್ಟ್ ಲುಕ್ ರಿಲೀಸ್; ಹುಬ್ಬೇರಿಸಿದ ನೆಟ್ಟಿಗರು

19 ವರ್ಷಗಳ ಬಳಿಕ ದರ್ಶನ್ ನಟನೆಯ ‘ಶಾಸ್ತ್ರಿ’ ಚಿತ್ರ ಮರು ಬಿಡುಗಡೆ

TAGGED:Irfan Pathan- Yusuf Pathan losing patience on the fieldwatch viral video
Share This Article
Facebook Twitter Copy Link Print
Previous Article 19 ವರ್ಷಗಳ ಬಳಿಕ ದರ್ಶನ್ ನಟನೆಯ ‘ಶಾಸ್ತ್ರಿ’ ಚಿತ್ರ ಮರು ಬಿಡುಗಡೆ
Next Article ನಾನು ನಂದಿನಿ ಖ್ಯಾತಿಯ ‘ವಿಕ್ಕಿಪೀಡಿಯಾ’ ವಿಕಾಸ್‌ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?