Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪರ್ಣಾಗೆ ವಾಯ್ಸ್ ಅನೌನ್ಸ್ ಮೂಲಕ ನಮ್ಮ‌ ಮೆಟ್ರೋ ಶ್ರದ್ಧಾಂಜಲಿ, ಎಂದೆಂದಿಗೂ ನಿಮ್ಮ ಧ್ವನಿ ಜೀವಂತ…
ಕರ್ನಾಟಕಪ್ರಮುಖಮನರಂಜನೆ

ಅಪರ್ಣಾಗೆ ವಾಯ್ಸ್ ಅನೌನ್ಸ್ ಮೂಲಕ ನಮ್ಮ‌ ಮೆಟ್ರೋ ಶ್ರದ್ಧಾಂಜಲಿ, ಎಂದೆಂದಿಗೂ ನಿಮ್ಮ ಧ್ವನಿ ಜೀವಂತ…

Share
1 Min Read
SHARE

newsics.com
ಬೆಂಗಳೂರು: ಖ್ಯಾತ ನಿರೂಪಕಿ ಅಪರ್ಣಾ ಅವರು ನಮ್ಮ ಮೆಟ್ರೋಗೆ (Namma Metro) ಧ್ವನಿಯಾಗಿದ್ದರು.

ಮೆಟ್ರೋ ನಿಲ್ದಾಣ ಮತ್ತು ರೈಲುಗಳಲ್ಲಿ ಸೂಚನೆಗಳು ಅಪರ್ಣಾ ಅವರ ಧ್ವನಿಯಲ್ಲಿ ಕೇಳುತ್ತವೆ. ಮುಂದಿನ ನಿಲ್ದಾಣ ನಾಡಪ್ರಭು ಕೆಂಪೇಗೌಡ ನಿಲ್ದಾಣ.., ಬಾಗಿಲುಗಳು ಎಡಕ್ಕೆ ತೆರೆಯಲಿವೆ ಎಂಬ ಶಾರೀರ ಅಪರ್ಣಾ ಅವರದ್ದು.

ಆದರೆ, ಇದೀಗ ಶಾರೀರ ಇದ್ದು ಶರೀರ ಇಹಲೋಕ ತ್ಯಜಿಸಿದೆ. ನಿರೂಪಕಿ ಅಪರ್ಣಾ ಅವರಿಗೆ ಬಿಎಂಆರ್ಸಿಎಲ್ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. ನಮ್ಮ ಮೆಟ್ರೋದಲ್ಲಿ ವಾಯ್ಸ್ ಅನೌನ್ಸ್ ಮಾಡುವ ಮೂಲಕ ಗೌರವದ ಸಂತಾಪ ಸೂಚಿಸಿದ್ದಾರೆ.
ನಿರೂಪಕಿ ಅಪರ್ಣಾ ಅವರು ಕಳೆದ 13 ವರ್ಷಗಳಿಂದ ನಮ್ಮ ಮೆಟ್ರೋಗೆ ಧ್ವನಿ ನೀಡಿದ್ದಾರೆ. ಮೊದಲ ಬಾರಿಗೆ 2011ರ ಅಕ್ಟೋಬರ್ 20 ರಂದು ಎಂಜಿ ರೋಡ್ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಆರಂಭಿಸಿದಾಗಿನಿಂದ ಇತ್ತೀಚೆಗೆ 2023ರ ಅಕ್ಟೋಬರ್ 9 ರಂದು ಉದ್ಘಾಟನೆಗೊಂಡ ಕೆಂಗೇರಿಯಿಂದ ಚಲ್ಲಘಟ್ಟ, ಕೆ.ಆರ್ ಪುರನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ರೈಲು ಮತ್ತು ನಿಲ್ದಾಣಗಳಲ್ಲಿ ನಟಿ ಅಪರ್ಣಾ ವಾಯ್ಸ್ ನೀಡಿದ್ದರು.
ತಮ್ಮ ಧ್ವನಿ ನಿಲ್ದಾಣಗಳಲ್ಲಿ ಮತ್ತು ಮೆಟ್ರೋಗಳಲ್ಲಿ ಹೇಗೆ ಕೇಳಿಸುತ್ತದೆ ಎಂದು ತಿಳಿಯಲು ಅಪರ್ಣಾ ಅವರು 2011ರ ದೀಪಾವಳಿಯಂದು ಎಂಜಿ ರೋಡ್ನಿಂದ ಬೈಯ್ಯಪ್ಪನಹಳ್ಳಿವರಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದರು.

ಕಳೆದ 13 ವರ್ಷಗಳಿಂದ ಮೆಟ್ರೋ ನಿಲ್ದಾಣ ಮತ್ತು ರೈಲಿಗೆ ಅಪರ್ಣಾ ಧ್ವನಿ ನೀಡುತ್ತಾ ಬಂದಿದ್ದರು. ಈ ಹಿನ್ನೆಲೆಯಲ್ಲಿ ಬಿಎಂಆರ್ಸಿಎಲ್ ಅಧಿಕಾರಿಗಳು ಅಪರ್ಣಾ ಅವರ ಮನೆಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು.

ಎಲ್ಲ ಮೆಟ್ರೋ ರೈಲು ಮತ್ತು ನಿಲ್ದಾಣಗಳಲ್ಲಿ ಅಪರ್ಣಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸ್ಥಳೀಯ ಅಧಿಕಾರಿಗಳಿಗೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಸೂಚಿಸಿದ್ದಾರೆ.

https://x.com/OfficialBMRCL/status/1811650166882975936?t=I-kw4dzB3L13J7PWYrdiXw&s=19

https://x.com/OfficialBMRCL/status/1811650609545642228?t=4kHXj087VRW1H8AeDvYwNQ&s=19

ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…

ಅಪರ್ಣಾ ಮನೆಯಲ್ಲಿ ನೀರವ ಮೌನ… ಮಧ್ಯಾಹ್ನ 12ರವರೆಗೆ ಅಂತಿಮ‌ ದರ್ಶನ, ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ

ಎರಡು ವರ್ಷದಿಂದ ಶ್ವಾಸಕೋಶ ಕ್ಯಾನ್ಸರ್ ಜತೆ ಹೋರಾಡಿದ್ದ ಅಪರ್ಣಾ ಧೀರೆ… ಪತಿ ನಾಗರಾಜ್ ವಸ್ತಾರೆ ಕಂಬನಿ

ನುಡಿನಮನ… ಅಪರ್ಣಾ ಇಷ್ಟು ಬೇಗ ಸಾವಿನ ಮನೆಯ ಕದ ತಟ್ಟಬಾರದಿತ್ತು…

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

TAGGED:namma Metro tribute to Aparna through voice announcementyour voice lives on forever...
Share This Article
Facebook Twitter Copy Link Print
Previous Article ಇಂದೇ ಅಂಬಾನಿ ಮದುವೆ: ಅನಂತ್- ರಾಧಿಕಾ ವಿವಾಹಕ್ಕೆ ಎನ್‌ಎಸ್‌ಜಿ ಕಮಾಂಡೋ ಭದ್ರತೆ, ಸಂಚಾರಕ್ಕೆ 100 ಖಾಸಗಿ‌ ವಿಮಾನ
Next Article ನನ್ನ ನೋವು, ನೋವಿನ ಮುಖ ಯಾರಿಗೂ ತಿಳಿಯುವುದು ಬೇಡ ಎಂದಿದ್ದರು ಅಪರ್ಣಾ…

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?