newsics.com
ಬೆಂಗಳೂರು: ರಾತ್ರೋ ರಾತ್ರಿ ಬೀದಿಯಲ್ಲಿ ಒದ್ದಾಡಿ ರಕ್ತವಾಂತಿ ಮಾಡಿ ನಾಯಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಕೆ.ಆರ್.ಪುರಂನ ಭಟ್ಟರಹಳ್ಳಿಯಲ್ಲಿ ನಡೆದಿದೆ.
ರಸ್ತೆಯಲ್ಲಿಯೇ ಬೀದಿನಾಯಿಗಳು ನರಳಿ ನರಳಿ ಪ್ರಾಣಬಿಟ್ಟಿವೆ. ರಕ್ತವಾಂತಿ ಮಾಡುತ್ತ ತೀವ್ರ ಅಸ್ವಸ್ಥಗೊಂಡಿದ್ದ 6 ಬೀದಿನಾಯಿಗಳಲ್ಲಿ 5 ಬೀದಿನಾಯಿಗಳು ರಸ್ತೆಯಲ್ಲಿಯೇ ಒದ್ದಾಡಿ ಸಾವನ್ನಪ್ಪಿವೆ. ಒಂದು ನಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೀದಿನಾಯಿಗಳು ಸಾವನ್ನಪ್ಪುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.
ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಬೀದಿ ನಾಯಿಗಳ ಸಾವಿಗೆ ಕಾರಣ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ನಾಯಿಗಳ ರಕ್ತದ ಮಾದರಿ ರವಾನೆ ಮಾಡಲಾಗಿದೆ. ಈ ಬೀದಿನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿರುವ ಶಂಕೆಯನ್ನು ಪೊಲೀಸರು ವ್ಯಕ್ತವಾಗಿದೆ.