newsics.com
ಬೆಂಗಳೂರು: ನಗರದ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಕಸದ ಲಾರಿಯಲ್ಲಿ ಸಿಕ್ಕಿದ ಮಹಿಳೆಯ ಬೆತ್ತಲೆ ಶವದ ರಹಸ್ಯ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಬ್ಬರು ಮಕ್ಕಳ ತಾಯಿ ಜತೆ ಲಿವಿಂಗ್ ಟುಗೆದರ್ನಲ್ಲಿದ್ದ ವಿವಾಹಿತ ವ್ಯಕ್ತಿಯೇ ಕೊಲೆ ಮಾಡಿದ್ದಾನೆ. ಆರೋಪಿ ಸಂಶುದ್ದೀನ್ ಎಂಬಾತನನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ.
ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕೊಲೆ ರಹಸ್ಯ ಪತ್ತೆ ಮಾಡಿದ್ದಾರೆ. ಮೃತ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿ ಸಂಶುದ್ದೀನ್ ಅಸ್ಸಾಂ ಮೂಲದವನು. ಆತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಹೆಂಡತಿ ಹಾಗೂ ಮಕ್ಕಳು ಅಸ್ಸಾಂನಲ್ಲೇ ಇದ್ದು, ಸಂಶುದ್ದೀನ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾನೆ. ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಆಶಾ ಪರಿಚಯವಾಗಿದೆ. ಆಶಾ ಗಂಡ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸಹ ಇದ್ದಾರೆ. ಮೂರು ವರ್ಷಗಳ ಹಿಂದೆ ಇಬ್ಬರಲ್ಲೂ ಪ್ರೇಮಾಂಕುರವಾಗಿದ್ದು, ಹುಳಿಮಾವಿನಲ್ಲಿ ಮನೆ ಮಾಡಿಕೊಂಡು ಲಿವಿಂಗ್ ಟುಗೆದರ್ನಲ್ಲಿದ್ದರು.
ಆರೋಪಿ ಸಂಶುದ್ದೀನ್ ಹಾಗೂ ಆಶಾ ಆರಂಭದಲ್ಲಿ ಚೆನ್ನಾಗಿಯೇ ಇದ್ದರು. ನಂತರ ಆಶಾ ಪದೇ ಪದೇ ಜಗಳ ಮಾಡಲು ಆರಂಭಿಸಿದ್ದರು ಎನ್ನಲಾಗಿದೆ. ಶನಿವಾರ ಜಗಳ ಅತಿರೇಕಕ್ಕೆ ತಿರುಗಿದ್ದು, ಆಶಾ ಕತ್ತು ಹಿಸುಕಿ ಸಂಶುದ್ದೀನ್ ಕೊಲೆ ಮಾಡಿದ್ದಾನೆ.
ನಂತರ ಮೃತದೇಹವನ್ನು ಬೈಕ್ನಲ್ಲಿ ಇಟ್ಟುಕೊಂಡು ಬಂದಿದ್ದ ಆರೋಪಿ ಅದನ್ನು ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಕಸದ ಲಾರಿಯಲ್ಲಿ ಎಸೆದು ಪರಾರಿಯಾಗಿದ್ದ.
ಶನಿವಾರ ರಾತ್ರಿ ಸ್ಥಳೀಯ ವ್ಯಕ್ತಿಯೊಬ್ಬರು ಕಸ ಹಾಕಲು ಬಂದಿದ್ದಾಗ ಕಸದ ಲಾರಿಯಲ್ಲಿ ಯುವತಿಯ ತಲೆ ಕೂದಲು ಕಾಣಿಸಿತ್ತು. ಅವರು ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಬೆತ್ತಲಾಗಿದ್ದ ಮಹಿಳೆಯ ಶವ ಕಂಡಿದ್ದಾರೆ. ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು, ಹಂತಕನಿಗಾಗಿ ಶೋಧ ನಡೆಸಿದ್ದರು.
Relationship ಗಂಡ-ಹೆಂಡ್ತಿ ನಡುವೆ ಏಜ್ ಗ್ಯಾಪ್ ಎಷ್ಟಿರಬೇಕು? ದಾಂಪತ್ಯ ಜೀವನಕ್ಕೆ ವಯಸ್ಸಿನ ಅಂತರ ಮುಖ್ಯವೇ?
UPDATED NEWS ಕಾರಿಗೆ ಕ್ಯಾಂಟರ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು, ಸಂಚಾರ ಅಸ್ತವ್ಯಸ್ತ
Shefali Jariwala ನಟಿ ಶೆಫಾಲಿ ಜರಿವಾಲ ಸಾವಿನ ಹಿಂದಿನ ರಹಸ್ಯ ಬಿಚ್ಚಿಟ್ಟ ವೈದ್ಯರು