newsics.com
ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಅನ್ನು ಕಳೆದ 11 ಸೀಸನ್ಗಳನ್ನು ಯಶಸ್ವಿಯಾಗಿ ನಿರೂಪಣೆ ಮಾಡಿದ್ದಾರೆ ಕಿಚ್ಚ ಸುದೀಪ್. ಆದ್ರೆ ಬಿಗ್ಬಾಸ್ ಸೀಸನ್ 11 ನಡೆಯುತ್ತಿದ್ದಾಗಲೇ ಕಿಚ್ಚ ಸುದೀಪ್ ಅವರು ವಿದಾಯ ಹೇಳಿದ್ದರು. ಇದು ನನ್ನ ಕೊನೆಯ ಶೋ ಅಂತ ಹೇಳಿ ಶಾಕ್ ಕೊಟ್ಟಿದ್ದರು. ಈ ಮಾತು ಅಭಿಮಾನಿಗಳ ಕಿವಿಗೆ ಬಿಳುತ್ತಿದ್ದಂತೆ ತೀವ್ರವಾಗಿ ಬೇಸರಗೊಂಡಿದ್ದರು.
ಮತ್ತೆ ಸುದೀಪ್ ಅವರೇ ಬಿಗ್ ಬಾಸ್ ನಿರೂಪಣೆ ಮಾಡಬೇಕು ಎಂದು ‘ಕಲರ್ಸ್ ಕನ್ನಡ’ ವಾಹಿನಿಯವರು ಮನವೊಲಿಸಲು ಹೋದಾಗ ಸುದೀಪ್ ಕೆಲವು ಸಲಹೆಗಳನ್ನು ನೀಡಿದರು. ತಮಗೆ ಈ ಹಿಂದೆ ಇದ್ದ ಅಸಮಾಧಾನಗಳ ಬಗ್ಗೆ ಅವರು ವಾಹಿನಿಯವರಿಗೆ ತಿಳಿಸಿದರು. ಅದು ಏನು ಎಂಬುದನ್ನು ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರು ವಿವರಿಸಿದರು.
ನೀವು ಯಾವುದೇ ಚಾನಲ್ನಲ್ಲಿ ಏನಾದರೂ ಮಾಡಿ. ನಮ್ಮ ಮೂಲ ಕನ್ನಡ. ಕನ್ನಡಕ್ಕೆ ಸ್ವಲ್ಪ ಪ್ರೀತಿ ತೋರಿಸಿ. ಎಲ್ಲಿಂದ? ಮೇಲಿಂದ. ನಮಗೆ ಇಲ್ಲಿ ವಾಹಿನಿಯವರಿಂದ ಯಾವುದೇ ರೀತಿಯ ಕೊರತೆ ಬಂದಿಲ್ಲ. ಆದರೆ ಮೇಲಿನವರಿಂದ ಆ ಪ್ರೀತಿ ಕಾಣಿಸುತ್ತಾ ಇರಲಿಲ್ಲ. ಇದು ನಾನು ಯಾರ ಮೇಲೂ ಮಾಡುತ್ತಿರುವ ಆರೋಪ ಅಲ್ಲ. ಇದು ನನ್ನ ವೈಯಕ್ತಿಯ ಅಭಿಪ್ರಾಯ’ ಎಂದಿದ್ದಾರೆ ಸುದೀಪ್.
ಇದೀಗ ಕೊನೆಗೂ ಬಿಗ್ಬಾಸ್ ವೀಕ್ಷಕರಿಗೆ ಖುಷಿ ಸುದ್ದಿ ಕೊಟ್ಟಿದೆ ತಂಡ. ಈ ಬಾರಿಯ ಬಿಗ್ಬಾಸ್ ಸೀಸನ್ 12 ನಿರೂಪಣೆ ಸಾರಥ್ಯವನ್ನು ಕಿಚ್ಚ ಸುದೀಪ್ ಅವರೇ ವಹಿಸಿಕೊಳ್ಳುತ್ತಿದ್ದಾರೆ. ಇದು ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ, ಬಿಗ್ಬಾಸ್ ವೀಕ್ಷಕರಿಗೆ ಖುಷಿ ಕೊಟ್ಟಿದೆ.
ಹೌದು, ಕನ್ನಡ ರಿಯಾಲಿಟಿ ಶೋ ಬಿಗ್ಬಾಸ್ 12 ಸೀಸನ್ ಆರಂಭಕ್ಕೆ ಸಜ್ಜಾಗಿದ್ದು, ಸದ್ಯ ಡೇಟ್ ರಿಲೀಸ್ ಬಗ್ಗೆ ಬಿಗ್ಬಾಸ್ ತಂಡ ಬಿಟ್ಟು ಕೊಟ್ಟಿಲ್ಲ. ಇನ್ನು, ಬಿಗ್ಬಾಸ್ ಹೊಸ ಸೀಸನ್ ಆರಂಭಕ್ಕೆ 3-4 ತಿಂಗಳು ಬಾಕಿ ಇದೆ. ಹೀಗಿರೋವಾಗ ಬಿಗ್ಬಾಸ್ ತಂಡ ನಿನ್ನೆ ಆಯೋಜನೆ ಮಾಡಿದ ಪ್ರೆಸ್ ಮೀಟ್ನಲ್ಲಿ ಮುಂದಿನ ಸೀಸನ್ ಅನ್ನು ಕಿಚ್ಚ ಸುದೀಪ್ ಅವರೇ ನಿರೂಪಕರಾಗಿ ಮುಂದುವರೆಯಲಿದ್ದಾರೆ ಎಂದು ಅನೌನ್ಸ್ ಮಾಡಿದೆ