newsics.com
ಹಾಸನ : ಹಾಸನದಲ್ಲಿ ದಿನೇ ದಿನೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ ತಾನೆ ಹೃದಯಾಘಾತಕ್ಕೆ ಹಾಸನದಲ್ಲಿ ಐವರು ಸಾವನಪ್ಪಿದ್ದರು. ಇದೀಗ ಒಂದುವರೆ ತಿಂಗಳ ಬಾಣಂತಿ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಒಂದೂವರೆ ತಿಂಗಳ ಬಾಣಂತಿ ಹೃದಯಾಘಾತವಾಗಿ ಸಾವನನಪ್ಪಿದ್ದಾರೆ. ಹೌದು, ಬಾಣಂತನಕ್ಕೆ ಶಿವಮೊಗ್ಗ ಜಿಲ್ಲೆಯ ಐನೂರು ಗ್ರಾಮಕ್ಕೆ ಬಂದಿದ್ದ ಅಕ್ಷಿತಾ (22) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಅಕ್ಷಿತ ಹಾಸನದ ಕೊಮ್ಮೇನಹಳ್ಳಿಯ ನಿವಾಸಿಯಾಗಿದ್ದು, ಹೆರಿಗೆ ಬಳಿಕ ತವರಿಗೆ ತೆರಳಿದ್ದರು. ಮೊನ್ನೆ ರಾತ್ರಿ ಅಕ್ಷಿತಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೊಮ್ಮೇನಹಳ್ಳಿ ಗ್ರಾಮದಿಂದ ಅಕ್ಷಿತಾ ತಮ್ಮ ಪತಿಯನ್ನು ಕರೆಸಿಕೊಂಡಿದ್ದಾರೆ. ಆದರೆ ನಿನ್ನೆ ಬೆಳಗ್ಗೆ ಆಸ್ಪತ್ರೆಗೆ ಕರೆದೋಯ್ಯುವಾಗಲೇ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.
ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಬಲಿ; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು.!