newsics.com
ಶಿವಮೊಗ್ಗ: ಮಾಜಿ ಉಪಮುಖ್ಯಂತ್ರಿ ಕೆ.ಎಸ್. ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಕಾಂತೇಶ್ ಅವರ ಪತ್ನಿ ಶಾಲಿನಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಳೆದ ಏಪ್ರಿಲ್ನಲ್ಲಿ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರಿಗೆ ಸೂಚಿಸಿತ್ತು. ಅದರನ್ವಯ ಎಫ್ಐಆರ್ ಹಾಲಾಗಿದೆ
ನಾಳೆ ಬೆಳಗ್ಗೆ ಕಚೇರಿಗೆ ಬರುವಂತೆ ಲೋಕಾಯುಕ್ತ ಪೊಲೀಸರು ಸೂಚನೆ ನೀಡಿದ್ದಾರೆ. ಸದ್ಯ ಈಶ್ವರಪ್ಪ ಕುಟುಂಬ ಕೇರಳ ಪ್ರವಾಸದಲ್ಲಿದ್ದಾರೆ.