newsics.com
ಹನಿಮೂನ್ಗೆ ಕರೆದೊಯ್ದು ಪತಿಯನ್ನೇ ಮುಗಿಸಿರೋ ಹಂತಕಿ ಸೋನಂ ಕೇಸ್ ದಿನದಿಂದ ದಿನಕ್ಕೆ ಕುತೂಹಲದ ತಿರುವು ಪಡೆದುಕೊಳ್ಳುತ್ತಿದೆ.ಸೋನಂ ರಘುವಂಶಿ ತನ್ನ ಲವರ್ ರಾಜ್ ಕುಶ್ವಾಹ್ನನ್ನು ಮದುವೆಯಾಗಿರುವುದಾಗಿ ಅನುಮಾನ ವ್ಯಕ್ತವಾಗುತ್ತಿದೆ. ಇದಕ್ಕೆ ಕಾರಣ, ಘಟನಾ ಸ್ಥಳದಲ್ಲಿ ಸಿಕ್ಕ ಎರಡು ಮಂಗಳಸೂತ್ರಗಳು.
ಇದರಲ್ಲಿ ಒಂದು ರಾಜಾ ರಘುವಂಶಿ ಜೊತೆ ಮದುವೆಯಾಗುವ ಸಂದರ್ಭದಲ್ಲಿ ಕೊಟ್ಟ ಮಂಗಳಸೂತ್ರವಾಗಿರುವುದಾಗಿ ರಾಜಾ ಅವರ ಸಹೋದರ ಹೇಳಿದ್ದಾರೆ. ಆದರೆ ಇನ್ನೊಂದು ಎರಡೂ ಮನೆಯಿಂದ ಕೊಟ್ಟದ್ದಲ್ಲ. ಆದ್ದರಿಂದ ಅಲ್ಲೇ ಈಕೆ ರಾಜ್ ಕುಶ್ವಾಹ್ನನ್ನು ಮದುವೆಯಾಗಿರಬೇಕು ಅಥವಾ ಅಲ್ಲಿಯೇ ಮದುವೆಗೆ ಪ್ಲ್ಯಾನ್ ಮಾಡಿರಬೇಕು ಎಂದು ನಂಬಲಾಗಿದೆ.
ಮಧ್ಯಪ್ರದೇಶದ ಇಂದೋರ್ನ ರಾಜಾ ರಘುವಂಶಿ ಮ*ರ್ಡರ್ ಕೇಸ್ ದೇಶಾದ್ಯಂತ ಹಲ್ಚಲ್ ಸೃಷ್ಟಿಸುತ್ತಿದೆ. ಮದುವೆಯೆಂದರೆ ಪುರುಷರ ನಡುಗುವ ಸ್ಥಿತಿಗೆ ಬಂದು ತಲುಪಿದೆ ಈ ಕೇಸ್. ಮೊದಲೇ ಬೇರೊಬ್ಬನ ಜೊತೆ ಸಂಬಂಧ ಹೊಂದಿದ್ದ ಸೋನಂ ಹನಿಮೂನ್ಗೆ ಗಂಡನನ್ನು ಕರೆದುಕೊಂಡು ಹೋಗಿ ಮುಗಿಸಿದ್ದಾಳೆ.
ಸೋನಂ ತನ್ನ ಜಾತಕದಲ್ಲಿನ ಈ ದೋಷ ಪರಿಹಾರಕ್ಕೆ ಪತಿಯನ್ನೇ ಸಾಯಿಸಿ ಲವರ್ ಜೊತೆ ಮದುವೆಯಾಗುವ ಪ್ಲ್ಯಾನ್ ಮಾಡಿದ್ದಳು ಎಂದು ಇದಾಗಲೇ ಪೊಲೀಸರ ತನಿಖೆಯಿಂದ ಬಹಿರಂಗಗೊಂಡಿದೆ.
ಅಷ್ಟಕ್ಕೂ, ಕೃತ್ಯಕ್ಕೂ ಮುನ್ನ ಸೋನಂ ತನ್ನ ಲವರ್ ರಾಜ್ ಕುಶ್ವಾಹ್ ಮೂಲಕ ಹನಿಮೂನ್ಗೆ ಹೋಗುವ ಮುನ್ನ ಮನೆಯ ಬಾಗಿಲಿಗೆ ಪತಿಯ ಗೊಂಬೆಯನ್ನು ನೇತು ಹಾಕಿರುವುದು ಇದಾಗಲೇ ಬೆಳಕಿಗೆ ಬಂದಿದೆ. ಆಕೆ ಅತ್ತ ಹನಿಮೂನ್ಗೆ ಹೋಗುತ್ತಿದ್ದಂತೆಯೇ, ಮೊದಲೇ ಈ ಗೊಂಬೆಯನ್ನು ನೇತು ಹಾಕುವಂತೆ ತನ್ನ ಪ್ರಿಯಕರನಿಗೆ ಆಕೆ ಹೇಳಿದ್ದಳು. ಆದರೆ, ಇದು ಮನೆಯ ಒಳಿತಿಗಾಗಿ ಎಂದು ಮನೆಯವರನ್ನು ಆಕೆ ನಂಬಿಸಿದ್ದಳು. ಅಲ್ಲಿ ಕೊಲೆಯಾದ ಬಳಿಕ ಆ ಗೊಂಬೆಯನ್ನು
ನೇತು ಹಾಕುವಂತೆ ತನ್ನ ಪ್ರಿಯಕರನಿಗೆ ಆಕೆ ಹೇಳಿದ್ದಳು. ಆದರೆ, ಇದು ಮನೆಯ ಒಳಿತಿಗಾಗಿ ಎಂದು ಮನೆಯವರನ್ನು ಆಕೆ ನಂಬಿಸಿದ್ದಳು. ಅಲ್ಲಿ ಕೊಲೆಯಾದ ಬಳಿಕ ಆ ಗೊಂಬೆಯನ್ನು ತೆಗೆದಿದ್ದಳು ಎನ್ನುವುದು ತನಿಖೆಯಿಂದ ಬೆಳಕಿಗೆ ಬಂದಿದೆ.