newsics.com
ರಾಯಚೂರು: ಮೊಹರಂ ಆಚರಣೆ ವೇಳೆ ಅಲಾಯಿ ಕುಣಿ(ಅಗ್ನಿ ಕುಂಡ)ಯಲ್ಲಿನ ಬೆಂಕಿಗೆ ವ್ಯಕ್ತಿಯೊಬ್ಬರು ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಲಿಂಗಸುಗೂರು ತಾಲ್ಲೂಕಿನ ಯರಗುಂಟಿ ಗ್ರಾಮದಲ್ಲಿ ನಡೆದಿದೆ.
ಹನುಮಂತ (40) ಗಾಯಗೊಂಡ ವ್ಯಕ್ತಿ ಎಂದು ಬಂದಿದೆ. ಅಲಾಯಿ ನೃತ್ಯ ಮಾಡುತ್ತಿರುವ ಆಯತಪ್ಪಿ ಕುಣಿಯಲ್ಲಿನ ಬೆಂಕಿಗೆ ಬಿದ್ದಿದ್ದಾರೆ. ಅಲ್ಲಿಯೇ ಇದ್ದ ಜನರು ಅವರನ್ನು ಬೆಂಕಿಯಿಂದ ಹೊರಗಡೆ ಎಳೆದಿದ್ದಾರೆ.
ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡ ಹನುಮಂತ ಅವರನ್ನು ಲಿಂಗಸುಗೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈಗ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Spain: ಟೇಕ್ ಆಫ್ ವೇಳೆ ಫೈರ್ ಅಲರ್ಟ್; ವಿಮಾನದಿಂದ ಜಿಗಿದ ಪ್ರಯಾಣಿಕರು, ಆಗಿದ್ದೇನು?