newsics.com
ಶಿವಮೊಗ್ಗ : ಶಿವಮೊಗ್ಗದ ಬಂಗಾರಪ್ಪ ಬಡಾವಣೆಯಲ್ಲಿ ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರೆಹಮತ್ವುಲ್ಲಾ ಹಾಗೂ ಸದ್ದಾಂನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಮುನ್ನೆಚ್ಚರಿಕೆಯಿಂದ ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಿಡಿಗೇಡಿಗಳು ಮಾಡಿದ ಉದ್ಧಟತನದಿಂದಾಗಿ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ರೆ, ಸಕಾಲಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದಾರೆ.
ಬಂಗಾರಪ್ಪ ಬಡಾವಣೆಯ ಮುಖ್ಯ ರಸ್ತೆಯ ಬಳಿಯ ಪಾರ್ಕ್ ನಲ್ಲಿ ಗಣೇಶನ ಮೂರ್ತಿ ಹಾಗೂ ನಾಗನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ನಿನ್ನೆ (ಜುಲೈ 05) ಸಂಜೆ ಇಬ್ಬರು ಅನ್ಯಕೋಮಿ ಯುವಕರು ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಪರಾರಿಯಾಗಿದ್ದರು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಅದರಂತೆ ಇದೀಗ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಅನ್ಯಕೋಮಿನ ವ್ಯಕ್ತಿ ಗಣೇಶನ ಮೂರ್ತಿಗೆ ಒದ್ದು, ಅವಮಾನ ಮಾಡಿದ್ದಾನೆ. ಬಳಿಕ ಅಲ್ಲೇ ಇದ್ದ ನಾಗರ ವಿಗ್ರಹ ಚರಂಡಿಗೆ ಎಸೆದು ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳೀಯರೆಲ್ಲಾ ಸೇರಿ ಇತ್ತೀಚೆಗಷ್ಟೇ ಗಣಪತಿ ವಿಗ್ರಹ ಪ್ರತಿಷ್ಠಾಪನೆ ಮಾಡಿದ್ರು. ಈ ಕೆಲಸವನ್ನ ಅನ್ಯಕೋಮಿನವರೇ ಮಾಡಿದ್ದಾರೆ ಎಂದು ಕೆಲವರು ಆರೋಪ ಮಾಡಿದ್ದಾರೆ. ಬಡಾವಣೆ ಜನರು ಅನ್ಯಕೋಮಿನ ವ್ಯಕ್ತಿ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 51ಕ್ಕೆ ಏರಿಕೆ; 27 ಬಾಲಕಿಯರು ನಾಪತ್ತೆ