newsics.com
ನಟರಾದ ಶಿವರಾಜ್ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಬಗ್ಗೆ ಮನು ಅವಹೇಳನಕಾರಯಾಗಿ ಮಾತನಾಡಿದ್ದ ಆಡಿಯೋ ಕ್ಲಿಪ್ವೊಂದು ವೈರಲ್ ಆಗಿತ್ತು.
ಇದೀಗ ಮಡೆನೂರು ಮನು ನಟ ದರ್ಶನ್ ಬಳಿ ಕ್ಷಮೆ ಬಳಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.
ಈ ಬಗ್ಗೆ ವಿಡಿಯೋದಲ್ಲಿ ಮಾತಾಡಿದ ಮಡೆನೂರು ಮನು, ದರ್ಶನ್ ಅಭಿಮಾನಿಗಳು ನನಗೆ ಕಾಲ್ ಹಾಗೂ ಮೆಸೇಜ್ಗಳನ್ನು ಮಾಡಿದ್ದರು. ಕ್ಷಮೆ ಕೇಳಿದ್ರಾ, ಅವರನ್ನು ಭೇಟಿಯಾದ್ರಾ ಅಂತ. ಒಂದು ಸರಿ ಭೇಟಿಯಾಗಿ ಅಂತ ಸುಮಾರು ಜನ ಹೇಳಿದ್ರು. ಆದ್ರೆ ನಟ ದರ್ಶನ್ ಅವರು ಬ್ಯುಸಿಯಾಗಿದ್ದಾರೆ ಎಂದು ಗೊತ್ತಾಯ್ತು. ಡಿ ಬಾಸ್ ನಾನೊಬ್ಬ ಪುಟ್ಟ ಕಲಾವಿದ. ಒಂದು ಸಂಘ, ಸಹವಾಸಗಳನ್ನು ಮಾಡಿ, ಜೊತೆಯಲ್ಲಿ ಇರುವವರನ್ನು ನಂಬಿ ಈ ಆಡಿಯೋದಿಂದ ನಾನು ಬಲಿಯಾಗಿದ್ದೇನೆ. ದಯವಿಟ್ಟು ನನ್ನ ಕ್ಷಮಿಸಿ..ಕ್ಷಮಿಸಿ..ಕ್ಷಮಿಸಿ.. ಇಡೀ ಡಿ ಬಾಸ್ ಅಭಿಮಾನಿಗಳು, ಕರ್ನಾಟಕದ ಜನತೆಗೆ ನನಗೆ ಒಂದು ಜೀವದಾನ ಕೊಟ್ಟಿದ್ದೀರಿ. ನನ್ನ ಉಸಿರು ಇರುವವರೆಗೂ ನಿಮ್ಮನ್ನು ಮರೆಯೋದಿಲ್ಲ. ಈ ಪುಟ್ಟ ಕಲಾವಿದನನ್ನು ಕ್ಷಮಿಸಿ ಅಂತ ಅಂಗಲಾಚಿ ಬೇಡಿಕೊಂಡಿದ್ದಾರೆ.