newsics.com
ಚಿತ್ರದುರ್ಗ:ಹೊಳಲ್ಕೆರೆ ತಾಲೂಕಿನ ಉಪ್ಪರಿಗೆನಹಳ್ಳಿ ಗ್ರಾಮದಲ್ಲಿ ಮಳೆಗಾಗಿ. ಪ್ರಾರ್ಥಿಸಿ ಕತ್ತೆಗಳಿಗೆ ಮದುವೆ ಮಾಡಿಸಿ ಮೆರವಣಿಗೆ ಮಾಡಲಾಯಿತು.
ಗ್ರಾಮಕ್ಕೆ ಮಳೆ ಇಲ್ಲದೆ ಜನರ ಜೀವನ ಕಂಗಲಾಗಿದೆ, ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದೆ ಇದ್ದ ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಇದ್ದಲ್ಲದ ಮಧ್ಯೆ ಕರೆಂಟಿನ ಅಭಾವ ಇದೆ. ಕೃಷಿಗೆ ಮಳೇಯ ನೀರೇ ಆಧಾರವಾಗಿದೆ, ಆದರೆ ವರುಣ ಕಣ್ಣು ಬಿಡುತ್ತಿಲ್ಲ, ಮಳೆ ಇಲ್ಲೆ ಗ್ರಾಮದ ಜನತೆ ಕಂಗಾಲಾಗಿದ್ದಾರೆ.
ಆದರೆ ಕತ್ತೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆ ಹಿಂದಿನ ಕಾಲದಿಂದಲೂ ಇದೆ ಈ ಹಿನ್ನಲೆಯಲ್ಲಿ ಇಂದು ಉಪ್ಪರಿಗೆನಹಳ್ಳಿ ಗ್ರಾಮದಲ್ಲಿ ಕತ್ತೆಗಳ ಮದುವೆಯನ್ನು ಮಾಡಿ ಗ್ರಾಮದ ತುಂಬೆಲ್ಲಾ ಮೆರವಣಿಗೆಯನ್ನು ನಡೆಸುವುದರ ಮೂಲಕ ಮಳೆಗಾಗಿ ಪ್ರಾರ್ಥಿಸಲಾಯಿತು.
ಈ ಕಾರ್ಯುಕ್ರಮ ಊರಿನ ಗುಡಿ ಗೌಡರಾದ ತಿಪ್ಪೇಸ್ವಾಮಿಯವರ ನೇತೃತ್ವದಲ್ಲಿ ನಡೆಸಲಾಯಿತು. ಇದರಲ್ಲಿ ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.