newsics.com
ಬೆಂಗಳೂರು: ಎರ್ಶೋ ಆಯೋಜಿಸುವ ಸಂಬಂಧ ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಾರಿ ದಸರಾ ಆಚರಣೆ ವೇಳೆ ಎರ್ಶೋ ಆಯೋಜಿಸುವ ಸಂಬಂಧ ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡುವುದು ದಿಲ್ಲಿ ಭೇಟಿಯ ಉದ್ದೇಶ ಎಂದು ಹೇಳಲಾಗುತ್ತಿದೆ.
ಬುಧವಾರ ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ ಸಿದ್ದರಾಮಯ್ಯ ಸಂಜೆ 04.30ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಲಿದ್ದಾರೆ. ಆದರೆ ಇದೇ ಸಂದರ್ಭ ಬಳಸಿಕೊಂಡು ರಾಜ್ಯದ ವಿದ್ಯಮಾನಗಳನ್ನು ಮನವರಿಕೆ ಮಾಡಿಕೊಡಲು ಹೈಕಮಾಂಡ್ ಅನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಷಯ ಏನೆಂದರೆ ಈ ಬಾರಿಯ ದಸರಾ ಉತ್ಸವದ ವಿಶೇಷ ಆಕರ್ಷಣೆಯಾಗಿ ಮೈಸೂರಿನಲ್ಲಿ ವೈಮಾನಿಕ ಪ್ರದರ್ಶನ (ಏರ್ ಶೋ) ನಡೆಸಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದ್ದು. ಇದಕ್ಕಾಗಿ ಕೇಂದ್ರ ಸರಕಾರದ ಅನುಮತಿ ಪಡೆಯಲು ಮುಂದಾಗಿದೆ.
ಸ್ವಪಕ್ಷದ ಶಾಸಕರಿಂದಲೇ ಭ್ರಷ್ಟಾಚಾರದ ಆರೋಪ, ಕೋಮುಗಲಭೆ, ಸಿಎಂ ಬದಲಾವಣೆಯ ಕೂಗು, ಶಾಸಕರ ಅಸಮಾಧಾನಗಳು ರಾಜ್ಯ ಕಾಂಗ್ರೆಸ್ ನಲ್ಲಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಾಯಕರನ್ನೂ ಭೇಟಿಯಾಗಿ ಚರ್ಚಿಸುವ ಸಾಧ್ಯತೆಯಿದೆ.
Jhansi Railway Station ಪ್ಲಾಟ್ಫಾರ್ಮ್ನಲ್ಲೇ ಚಾಕು, ಹೇರ್ಪಿನ್ ಬಳಸಿ ಹೆರಿಗೆ ಮಾಡಿಸಿದ ಸೇನಾ ವೈದ್ಯ