Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nitin Gadkari ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಗಡ್ಕರಿಯಿಂದ ಮಹತ್ವದ ಅಪ್​​​ಡೇಟ್ಸ್
ಕರ್ನಾಟಕದೇಶ

Nitin Gadkari ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಗಡ್ಕರಿಯಿಂದ ಮಹತ್ವದ ಅಪ್​​​ಡೇಟ್ಸ್

Share
1 Min Read
SHARE

newsics.com

ಬೆಂಗಳೂರಿನಲ್ಲಿ‌ ಟ್ರಾಫಿಕ್‌ ಸಮಸ್ಯೆ ಯಾರಿಗೆ ಗೊತ್ತಿಲ್ಲ ಹೇಳಿ.ಬೆಂಗಳೂರು, ಮಾಯಾನಗರಿ.. ಲಕ್ಷಾಂತರ ಮಂದಿಗೆ ಬದುಕು ಕಟ್ಟಿಕೊಟ್ಟ ಜೀವನಾಡಿ.. ಇಂಥ ಮಾಯನಗರಿಗೆ ಟ್ರಾಫಿಕ್‌ ಅನ್ನೋ ಪೆಡಂಭೂತ ಕಾಡ್ತಿದೆ. ಇದೀಗ ಟ್ರಾಫಿಕ್ ಜಾಮ್​​ನಿಂದ ಬೇಸತ್ತಿರುವ ಬೆಂಗಳೂರಿನ ಜನರಿಗೆ ಕೇಂದ್ರದ ಹೆದ್ದಾರಿ ಮತ್ತು ಭೂ ಸಾರಿಗೆ ಇಲಾಖೆ ಸಚಿವ ನಿತಿನ್ ಗಡ್ಕರಿ  ಗುಡ್ ನ್ಯೂಸ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಪಾಡ್ ಟ್ಯಾಕ್ಸಿ , ಹೈಪರ್​ಲೂಪ್  ಸಾರಿಗೆ ವ್ಯವಸ್ಥೆ ಹಾಗೂ ಪಿಲ್ಲರ್ ಆಧಾರಿತ ಸಾಮೂಹ ಸಾರಿಗೆ ವ್ಯವಸ್ಥೆಯನ್ನು ಬೆಂಗಳೂರು ಮತ್ತು ದೆಹಲಿ ನಗರಗಳಲ್ಲಿ ಪೈಲಟ್ ಪ್ರಾಜೆಕ್ಟ್ ಆಗಿ ಜಾರಿಗೊಳಿಸುವ ಯೋಜನೆ ಇದೆ ಎಂದು ಗಡ್ಕರಿ ಹೇಳಿದ್ದಾರೆ.

ಎಲೆಕ್ಟ್ರಿಕ್‌ ತುರ್ತು ಸಾರಿಗೆ ಯೋಜನೆಗಳ ಕುರಿತು ವಿವರ ನೀಡಿದ ಅವರು, ಸದ್ಯ 135 ಸೀಟ್‌ನ ಎಲೆಕ್ಟ್ರಿಕ್‌ ಸಾರಿಗೆ ಬಸ್‌ ನಾಗ್ಪುರದಲ್ಲಿ ಪ್ರಾಯೋಗಿಕವಾಗಿ ಸಂಚರಿಸುತ್ತಿದೆ. ಈ ಪರೀಕ್ಷೆ ಪೂರ್ಣಗೊಂಡರೆ ಬೆಂಗಳೂರು- ಚೆನ್ನೈ, ದೆಹಲಿ-ಚಂಡೀಗಢ, ದೆಹಲಿ-ಡೆಹ್ರಾಡೂನ್‌, ದೆಹಲಿ-ಮೀರತ್‌, ದೆಹಲಿ-ಜೈಪುರ, ಮುಂಬೈ-ಪುಣೆ, ಮುಂಬೈ-ಔರಂಗಾಬಾದ್‌ ಮತ್ತು ಇತರೆ ನಗರಗಳ ನಡುವೆಯೂ ಪರಿಚಯಿಸಲಾಗುವುದು ಎಂದು ತಿಳಿಸಿದರು.

 

ಕೇಂದ್ರ ಸರ್ಕಾರವು ಸಾರಿಗೆ ವ್ಯವಸ್ಥೆಯಲ್ಲಿ ಆ‍ವಿಷ್ಕಾರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸಮೂಹ ಸಾರಿಗೆ ವಿಚಾರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಡುತ್ತಿದ್ದೇವೆ. ಅಮೆರಿಕದ ಗುಣಮಟ್ಟದ ರಸ್ತೆಯನ್ನು ದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವುದಾಗಿ ಗಡ್ಕರಿ ನುಡಿದರು.

ಪಾಡ್ ಟ್ಯಾಕ್ಸಿಗಳು ರಸ್ತೆಯ ಮೇಲೆ ಓಡಾಡಲ್ಲ. ಇವು ಆಗಸದಲ್ಲಿ ಕೇಬಲ್ ಮೂಲಕ ಚಲಿಸುವ ಟ್ಯಾಕ್ಸಿಗಳು. ಇವು ಸಣ್ಣ ಕಾರಿನ ರೀತಿಯಲ್ಲಿ ಇರುತ್ತವೆ. ಇವುಗಳಲ್ಲಿ ಒಂದರಲ್ಲಿ 4-6 ಜನರು ಕುಳಿತು ಪ್ರಯಾಣ ಮಾಡಬಹುದು. ಅಗಸದಲ್ಲಿ ಚಲಿಸುವುದರಿಂದ ಯಾವುದೇ ಟ್ರಾಫಿಕ್ ಜಾಮ್ ಇರಲ್ಲ. ಗಂಟೆಗೆ 60 ರಿಂದ 120 ಕಿಮೀ ವೇಗದಲ್ಲಿ ಪಾಡ್ ಟ್ಯಾಕ್ಸಿಗಳು ಅಗಸದಲ್ಲಿ ಸಂಚಾರ ಮಾಡುತ್ತವೆ. ಬೆಂಗಳೂರಿನ ಮೆಜೆಸ್ಟಿಕ್ ನಿಂದ ಬೆಂಗಳೂರಿನ ದೇವನಹಳ್ಳಿ ಏರ್​ಪೋರ್ಟ್ ಅನ್ನು ಗಂಟೆಗೆ 130 ಕಿಮೀ ವೇಗದಲ್ಲಿ ಸಂಚರಿಸಿದರೆ 30 ನಿಮಿಷಕ್ಕೆ ತಲುಪಬಹುದು. ಹೀಗಾಗಿ ಟ್ರಾಫಿಕ್ ಜಾಮ್​ನಿಂದ ಬೇಸತ್ತಿರುವ ಜನರಿಗೆ ಪಾಡ್ ಟ್ಯಾಕ್ಸಿಗಳು ರಿಲೀಫ್ ನೀಡಲಿವೆ.

 

 

TAGGED:#Gadkari #traffic #centralgovernment #minister #banglore
Share This Article
Facebook Twitter Copy Link Print
Previous Article ‘ಸ್ಟಂಟ್’ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ : ವೈರಲ್ ವಿಡಿಯೋ ನೋಡಿ
Next Article Heart Attack :ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?