Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > adhar problem 12 ವರ್ಷದ ಈ ಬಾಲಕಿಗೆ ಆಧಾರ್ ಕಾರ್ಡೇ ಇಲ್ಲ! ಶಾಲೆಗೆ ಹೋಗಲು ನಿತ್ಯ 30 ರೂ. ಬಸ್ ಚಾರ್ಜ್, ಏನು ಕಾರಣ?
ಕರ್ನಾಟಕಪ್ರಮುಖ

adhar problem 12 ವರ್ಷದ ಈ ಬಾಲಕಿಗೆ ಆಧಾರ್ ಕಾರ್ಡೇ ಇಲ್ಲ! ಶಾಲೆಗೆ ಹೋಗಲು ನಿತ್ಯ 30 ರೂ. ಬಸ್ ಚಾರ್ಜ್, ಏನು ಕಾರಣ?

Share
1 Min Read
SHARE

newsics.com

ಚಾಮರಾಜನಗರ: ಈ ಸೋಲಿಗ ಬಾಲಕಿಗೆ 12 ವರ್ಷ ವಯಸ್ಸು. ಸತತ ಪ್ರಯತ್ನದ ಬಳಿಕವೂ ಈಕೆಗೆ ಆಧಾರ್ ಕಾರ್ಡ್ ಸಿಗದ್ದರಿಂದ ನಿತ್ಯವೂ ಹಣ ಕೊಟ್ಟು ಬಸ್‌ನಲ್ಲಿ ಓಡಾಡುವ ದುಸ್ಥಿತಿ ನಿರ್ಮಾಣವಾಗಿದೆ.

ಆಧಾರ್ ಕಾರ್ಡ್ ಸಿಗದ್ದರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಉಚಿತ ಬಸ್ ಪ್ರಯಾಣ, ಬ್ಯಾಂಕ್ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಯಾವುದೇ ಸರ್ಕಾರಿ ಸವಲತ್ತು ಸಿಕ್ತಿಲ್ಲ.

ಶಾಲೆಗೆ ಹೋಗಲೂ ನಿತ್ಯ 30 ರೂ. ಬಸ್ ಚಾರ್ಜ್ ಕೊಟ್ಟು ಓಡಾಡಬೇಕಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌಳೇಹಳ್ಳ ಡ್ಯಾಂ ನಿವಾಸಿ ಎಸ್ ಚೈತ್ರ ದುಸ್ಥಿತಿಯಿದು. ಬಾಲಕಿ ಚೈತ್ರಾ ಲೊಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ನಿತ್ಯವೂ ಶಾಲೆಗೆ ಕೌಳೇಹಳ್ಳದಿಂದ ಲೊಕ್ಕನಹಳ್ಳಿಗೆ ಸಂಚರಿಸಬೇಕಿದೆ. ಇದಕ್ಕಾಗಿ ನಿತ್ಯ 30 ರೂಪಾಯಿ ಖರ್ಚು ಮಾಡುವ ಪರಿಸ್ಥಿತಿ ಇದೆ.

ಪುಟ್ಟ ಹೆಣ್ಣು ಮಗುವಿನಿಂದ ಹಿಡಿದು ಎಲ್ಲಾ ವಯಸ್ಸಿನ ಮಹಿಳೆಯರಿಗೂ ಶಕ್ತಿ ಯೋಜನೆಯಲ್ಲಿ ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಇದೆ. ಆದರೆ ಈ ಸೋಲಿಗ ಬಾಲಕಿಗೆ ಮಾತ್ರ ಉಚಿತ ಪ್ರಯಾಣದ ಭಾಗ್ಯವಿಲ್ಲ. ಪ್ರತಿದಿನವೂ 30 ರೂಪಾಯಿ ಬಸ್ ಚಾರ್ಜ್ ತೆತ್ತು ಶಾಲೆಗೆ ಹೋಗಿಬರುವ ಪರಿಸ್ಥಿತಿ ಇದೆ. ಮೊದಲೇ ಬಡ ವಿದ್ಯಾರ್ಥಿ. ಉಚಿತ ಸೌಲಭ್ಯದಿಂದ ವಂಚಿತವಾಗಿದ್ದೇನೆ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.
ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆ, ಬಸ್ ಪ್ರಯಾಣ ಎಲ್ಲದಕ್ಕೂ ಆಧಾರ್ ಕಾರ್ಡ್ ಬೇಕೇಬೇಕು. ಆದರೆ ಆಧಾರ್ ಕಾರ್ಡ್ ಇಲ್ಲದೆ ಎಲ್ಲ ಸೌಲಭ್ಯಗಳಿಂದ ವಂಚಿತಳಾಗಿದ್ದಾಳೆ.

ಮನೆಯಲ್ಲಿ ಹುಟ್ಟಿದ್ದೇ ತಪ್ಪಾಯ್ತು:

ಈ ಬಾಲಕಿ ಚೈತ್ರಾ ಮನೆಯಲ್ಲೇ ಜನಿಸಿದ್ದರಿಂದ ಬರ್ತ್ ಸರ್ಟಿಫಿಕೇಟ್ ಸಿಕ್ಕಿಲ್ಲ. ಬರ್ತ್ ಸರ್ಟಿಫಿಕೇಟ್ ಇಲ್ಲದೆ ಆಧಾರ್ ಕಾರ್ಡ್ ಕೊಡ್ತಿಲ್ಲ. ತಂದೆ ಬದುಕಿಲ್ಲ, ತಾಯಿ ಮಹದೇವಮ್ಮ ಕೂಲಿ ಕೆಲಸ ಮಾಡ್ತಿದ್ದಾಳೆ. ನಿತ್ಯ ಕೂಲಿ ಮಾಡಿ ಮಗಳಿಗೆ ಬಸ್ ಚಾರ್ಜ್ ಕೊಟ್ಟು ಕಳಿಸಬೇಕಾಗಿದೆ. ಕೂಡಲೇ ಆಧಾರ್ ಕಾರ್ಡ್ ಸೌಲಭ್ಯ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Ramayana ravana ರಾಮಾಯಣದಲ್ಲಿ ರಾವಣನಾಗಿ ಯಶ್ ಕಾಣಿಸಿಕೊಳ್ಳೋದೆಷ್ಟು ಸಮಯ? ಸಂಭಾವನೆ ಎಷ್ಟು? ಗಾಬರಿಯಾಗದಿರಿ…

TAGGED:12-year-old girl doesn't have Aadhaar card! Bus fare of Rs. 30 per day to go to school
Share This Article
Facebook Twitter Copy Link Print
Previous Article Ramayana ravana ರಾಮಾಯಣದಲ್ಲಿ ರಾವಣನಾಗಿ ಯಶ್ ಕಾಣಿಸಿಕೊಳ್ಳೋದೆಷ್ಟು ಸಮಯ? ಸಂಭಾವನೆ ಎಷ್ಟು? ಗಾಬರಿಯಾಗದಿರಿ…
Next Article Terror news ಉಗ್ರ ಕೃತ್ಯಕ್ಕೆ ಸಂಚು: ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ASI ಸೇರಿ ಮೂವರ ಬಂಧನ, NIA ಹೇಳಿದ್ದೇನು?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?