newsics.com
ರಾಜಸ್ಥಾನ : ಭಾರತೀಯ ವಾಯುಪಡೆಯ ಯುದ್ಧ ವಿಮಾನವು ರಾಜಸ್ಥಾನದ ಚುರುವಿನ ಬನೋಡಾ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ 1.25 ರ ಸುಮಾರಿಗೆ ಪತನಗೊಂಡಿದೆ.
ವಿಮಾನದ ಅವಶೇಷಗಳಡಿಯಿಂದ ಪೈಲಟ್ ಮೃತದೇಹ ಹೊರತೆಗೆಯಲಾಗಿದೆ.
ಜಿಲ್ಲಾಧಿಕಾರಿ ಅಭಿಷೇಕ್ ಸುರಾನ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಅಪಘಾತದ ಪರಿಣಾಮವಾಗಿ ಹೊಲಗಳಲ್ಲಿ ಬೆಂಕಿ ಕಾಣಿಸಿಕೊಂಡಿತು, ಅದನ್ನು ತಾವೇ ನಂದಿಸಲು ಪ್ರಯತ್ನಿಸಿದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.