newsics.com
ಬೆಂಗಳೂರು: ಮದುವೆಯಾಗುವ ಭರವಸೆ ನೀಡಿ ಯುವತಿಯೊಂದಿಗೆ ಸಹ ಜೀವನ ನಡೆಸಿದ್ದರಿಂದ ಹುಟ್ಟಿದ ಮಗನಿಗೆ ಜೀವನಾಂಶ ಪಾವತಿಸುವುದಿಲ್ಲ ಎಂದು ಹಠ ಹಿಡಿದಿದ್ದ ಮಾಜಿ ಮುಖ್ಯ ಶಿಕ್ಷಕನಿಗೆ ಕಿವಿ ಹಿಂಡಿರುವ ಹೈಕೋರ್ಟ್, ಮಗನಿಗೆ ಮಾಸಿಕ ₹3 ಸಾವಿರ ಜೀವನಾಂಶ ಪಾವತಿಸುವಂತೆ ತಾಕೀತು ಮಾಡಿದೆ.
ಮಗನಿಗೆ ಜೀವನಾಂಶ ಪಾವತಿಸಲು ಒಪ್ಪದೆ ಮೊಂಡುವಾದ ಮಾಡಿದ್ದ ತುಮಕೂರು ಜಿಲ್ಲೆಯ ರಮೇಶ್ (48) ಎಂಬುವವರಿಗೆ ಹೈಕೋರ್ಟ್ ಈ ಆದೇಶ ಮಾಡಿದೆ.
ಮಗ ರಕ್ಷಿತ್ಗೆ ಮಾಸಿಕ ಮೂರು ಸಾವಿರ ರು. ಜೀವನಾಂಶ ಪಾವತಿಸುವಂತೆ 2018ರಲ್ಲಿ ನಿರ್ದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ಹೈಕೋರ್ಟ್ಗೆ ರಮೇಶ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಡಿಎನ್ಎ ಪರೀಕ್ಷೆಯಲ್ಲಿ ರಕ್ಷಿತ್, ರಮೇಶ್ ಪುತ್ರ ಎಂಬುದು ಸಾಬೀತಾಗಿದೆ. ಹಾಗಾಗಿ, ಮಗನ ಜೀವನ ನಿರ್ವಹಣೆ ಮಾಡುವುದು ತಂದೆಯ ಜವಾಬ್ದಾರಿಯಾಗಿದೆ. ಎಲ್ಲ ಅಂಶ ಪರಿಗಣಿಸಿಯೇ ಮಗನಿಗೆ ಮಾಸಿಕ ಮೂರು ಸಾವಿರ ರು. ಜೀವನಾಂಶ ನೀಡುವಂತೆ ಕೌಟುಂಬಿಕ ನ್ಯಾಯಾಲಯದ ಆದೇಶ ಸೂಕ್ತವಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸಲು ಸಕಾರಣವಿಲ್ಲ ಎಂದು ಆದೇಶಿಸಿದೆ.
ಕ್ರಿಮಿನಲ್ ಪ್ರಕರಣದಲ್ಲಿ ಖುಲಾಸೆಗೊಂಡ ಮಾತ್ರಕ್ಕೆ ರಮೇಶ್ನಿಂದ (ತಂದೆ) ಜೀವನಾಂಶ ಪಡೆಯುವ ಅರ್ಹತೆಯನ್ನು ಪುತ್ರ ರಕ್ಷಿತ್ನಿಂದ ನ್ಯಾಯಾಲಯ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಜೊತೆಗೆ, ಕೌಟುಂಬಿಕ ನ್ಯಾಯಾಲಯ ಆದೇಶದಂತೆ ಪುತ್ರ ರಕ್ಷಿತ್ಗೆ ಮಾಸಿಕ ಮೂರು ಸಾವಿರ ರು. ಜೀವನಾಂಶ ಪಾವತಿಸುವಂತೆ ರಮೇಶ್ಗೆ ನಿರ್ದೇಶಿಸಿದೆ.