newsics.com
ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅವಮಾನಗೊಂಡಿದ್ದ ಧಾರವಾಡ ಹೆಚ್ಚುವರಿ ಎ ಎಸ್ ಪಿ ನಾರಾಯಣ ಭರಮಣಿ ಅವರನ್ನು ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ನಾರಾಯಣ ಬರಮನಿ ಅವರನ್ನು ವೇದಿಕೆಗೆ ಕರೆಸಿದ್ದ ಸಿಎಂ ಅಡ್ಡಿಪಡಿಸಲು ಪ್ರತಿಭಟನಾಕಾರರಿಗೆ ಯಾಕೆ ಅವಕಾಶ ನೀಡಿದ್ದೀರಿ ಎಂದು ಪ್ರಶ್ನಿಸಿ ಸಾರ್ವಜನಿಕರೆದುರೇ ಹೊಡೆಯಲು ಕೈಎತ್ತಿದ್ದರು.
ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾದ ನಂತರ ಬರಮನಿ ಅವರು ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ್ದರು. ಕೊನೆಗೆ ನಾರಾಯಣ ಬರಮನಿ ಅವರನ್ನು ಹಿರಿಯ ಅಧಿಕಾರಿಗಳು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ ನಾರಾಯಣ ಬರಮನಿ ಅವರು ಕೆಲಸಕ್ಕೆ ಹಾಜರಾಗಿದ್ದರು. ಇದೀಗ ಎ ಎಸ್ ಪಿಯಾಗಿದ್ದ ನಾರಾಯಣ ಭರಮನಿ ಅವರನ್ನು ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
https://www.newsics.com/2025/07/17/collision-between-car-and-bike/