newsics.com
ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಇದೀಗ ಅಡ್ಡದಾರಿ ಹಿಡಿದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.112 ವಾಹನದ ಚಾಲಕನಾಗಿರುವ ಪುಟ್ಟಸ್ವಾಮಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂತ್ರಸ್ತೆ ಮಹಿಳೆ ದೂರು ದಾಖಲಿಸಿದ್ದಾಳೆ.
ಹೌದು, ನಮ್ಮೂರಲ್ಲಿ ಗಲಾಟೆಯಾಗುತ್ತಿದೆ ಬನ್ನಿ ಎಂದು ಎಂ ಕೆ ದೊಡ್ಡಿ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬಳು ರಕ್ಷಣೆ ಕೋರಿ 112ಗೆ ಕರೆ ಮಾಡಿ ದೂರು ಕೊಟ್ಟಿದ್ರು. ಆದರೆ ಆಕೆಯ ಫೋನ್ ನಂಬರ್ ಪಡೆದ ಪೇದೆ ಪುಟ್ಟಸ್ವಾಮಿ, ಆಕೆಯ ಜೊತೆ ಸಲುಗೆ ಬೆಳೆಸಿ ಆನಂತರ ಆಕೆಯ ಮನೆಯಲ್ಲಿಯೇ ನಾಲ್ಕು ಬಾರಿ ಆತ್ಯಾಚಾರ ಎಸಗಿದ್ದಾನೆ. ಕೇವಲ ಅದಷ್ಟೇ ಅಲ್ಲದೆ ಆಕೆಯಿಂದ ನಿರಂತರವಾಗಿ 12 ಲಕ್ಷ ರೂ. ಹಣವನ್ನು ಕೂಡ ಪೀಕಿದ್ದಾನೆ. ಕಾಲಕ್ರಮೇಣ ಆಕೆಯನ್ನ ಕಡೆಗಣಿಸಲು ಪ್ರಾರಂಭಿಸಿದ್ದಾನೆ. ಬಂಗಾರವನ್ನ ಅಡವಿಟ್ಟು ಕೊಟ್ಟ ಹಣವನ್ನ ವಾಪಸ್ ಕೇಳಿದ್ರೆ ದರ್ಪ ಮೆರೆದಿದ್ದಾನೆ.
ಇದೀಗ ಪುಟ್ಟಸ್ವಾಮಿ ವಿರುದ್ಧ ಸಂತ್ರಸ್ತೆ ಮಹಿಳೆ ದೂರು ದಾಖಲಿಸಿದ್ದಾಳೆ. ಇದರ ಬೆನ್ನಲ್ಲೇ ಪೇದೆ ಪುಟ್ಟಸ್ವಾಮಿಯನ್ನು ಅಮಾನತು ಮಾಡಲಾಗಿದೆ.ಪೇದೆ ಪುಟ್ಟಸ್ವಾಮಿ ಮೊಬೈಲ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾನೆ.
https://www.newsics.com/2025/07/20/brothers-who-married-the-same-bride/