newsics.com
ರಾಯಚೂರು: ದೇವರ ಸನ್ನಿಧಿ ಎಂಬುದನ್ನೂ ನೋಡದೆ ವ್ಯಕ್ತಿ ಮತ್ತು ಮಹಿಳೆ ಖುಲ್ಲಂ ಖುಲ್ಲಾಂ ರಾಸಲೀಲೆಯಲ್ಲಿ ತೊಡಗಿರುವ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ದೇವರಬೂಪುರ ಗ್ರಾಮದ ಅಮರೇಶ್ವರ ದೇವಾಲಯದ ಉದ್ಯಾನವನದಲ್ಲಿ ನಡೆದಿದೆ.
ಜನರ ವಿಶ್ರಾಂತಿಗಾಗಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಈ ಉದ್ಯಾನವನ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಸೂಕ್ತ ನಿರ್ವಹಣೆ ಇಲ್ಲದೆ ಗಬ್ಬೆದ್ದು ನಾರುತ್ತಿದೆ. ಉದ್ಯಾನಕ್ಕೆ ಪ್ರವೇಶದರ 10 ರೂಪಾಯಿ ಇದೆ. ಆದರೆ 200 ರೂಪಾಯಿ ಕೊಟ್ಟರೆ ಇಲ್ಲಿ ಏನ್ಬೇಕಾದ್ರೂ ಮಾಡಬಹುದಾಗಿದೆ ಎಂಬ ಆರೋಪವಿದೆ.
ಇದಕ್ಕೆಲ್ಲ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕನ್ನಡ ಸಂಘಟನೆ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.
ಅನೈತಿಕ ಚಟುವಟಿಕೆಯ ವಿಡಿಯೋ ಸಮೇತ ಲಿಂಗಸುಗೂರು ಸಹಾಯಕ ಆಯುಕ್ತರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ದೂರು ನೀಡಿದೆ. ಕೆಡಿಪಿ ಸಭೆಯಲ್ಲೂ ಈ ವಿಚಾರ ಸದ್ದು ಮಾಡಿದೆ. ಆದರೆ ಅರಣ್ಯ ಇಲಾಖೆ ಡಿಸಿಎಫ್ ಪ್ರವೀಣ್ ಹಾರಿಕೆಯ ಉತ್ತರ ನೀಡಿದ್ದಾರೆ.