newsics.com
ಹರಿಹರ: ‘ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ’ ಎಂದು ತಾಲ್ಲೂಕಿನ ಯಲವಟ್ಟಿ ಆಂಜನೇಯ ಸ್ವಾಮಿಯ ಕಾರ್ಣಿಕವಾಯಿತು.
ನಗರದ ತುಂಗಭದ್ರಾ ನದಿಯ ದಡದ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ನಾಗಪಂಚಮಿ ನಿಮಿತ್ತ ತಾಲೂಕಿನ ಯಲವಟ್ಟಿ ಗ್ರಾಮದ ಆಂಜನೇಯ ಸ್ವಾಮಿಯ ಕಾರ್ಣಿಕ ನುಡಿಯುವುದು ಪ್ರತಿವರ್ಷದ ಪ್ರತೀತಿಯಾಗಿದೆ.
ಪೂಜಾರಪ್ಪ ಕಾರ್ಣಿಕ ನುಡಿ ನುಡಿಯುತ್ತಿದ್ದಂತೆ ಅಲ್ಲಿದ್ದ ಭಕ್ತರು ತಮ್ಮದೇ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದರೆ ಇನ್ನು ಹಲವರು ತಮ್ಮವರಿಗೆ ಪೋನ್ ಮಾಡಿ ಕಾರ್ಣಿಕ ಆರ್ಥದ ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.
ಹರಿಹರ ತಾಲೂಕು ಸೇರಿದಂತೆ ಅಕ್ಕಪಕ್ಕದ ತಾಲೂಕಿನ ಹಲವು ಗ್ರಾಮಗಳ ವಿವಿಧ ದೇವತಾ ಮೂರ್ತಿಗಳು ತುಂಗಭದ್ರಾ ನದಿಯಲ್ಲಿ ಪೂಜೆ ಸಲ್ಲಿಸಿ ನಂತರ ನದಿಯ ದಡದಲ್ಲಿರುವ ಸಂಗಮೇಶ್ವರ ದೇವಸ್ಥಾನ ಆವರಣದಲ್ಲಿ ಸೇರುತ್ತವೆ.
ಸಾವಿರಾರು ಸಂಖ್ಯೆಯಲ್ಲಿ ಸೇರಿದ ಭಕ್ತರು ಕಾರ್ಣಿಕ ಮುಗಿದ ನಂತರ ಗೋವಿಂದಾ, ಗೋವಿಂದಾ ಎನ್ನುತ್ತಾ ಜಯ ಘೋಷ ಹಾಕಿದರು.
Relationship ಪತಿ-ಪತ್ನಿ ಬೇರೆ ಬೇರೆ ಕೋಣೆಗಳಲ್ಲಿ ಮಲಗಿದರೆ ಏನಾಗುತ್ತೆ?