newsics.com
ಮೈಸೂರು : ವಸತಿ ಶಾಲೆಯ ಅವ್ಯವಸ್ಥೆಯಿಂದಾಗಿ ರೊಚ್ಚಿಗೆದ್ದ ಪೋಷಕರು ಅತಿಥಿ ಶಿಕ್ಷಕನಿಗೆ ಗೂಸಾ ಕೊಟ್ಟಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಅಡಗಂಚಿಯಲ್ಲಿ ನಡೆದಿದೆ.
ಅಡಗಂಚಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಅವ್ಯವಸ್ಥೆ ಖಂಡಿಸಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.
ಮೂಲ ಸೌಕರ್ಯ ಇಲ್ಲವೆಂದು ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಧರಣಿ ವೇಳೆ ವಸತಿ ಶಾಲೆಯ ಅತಿಥಿ ಶಿಕ್ಷಕ ಗುರುಸ್ವಾಮಿಗೆ ವಿದ್ಯಾರ್ಥಿಗಳ ಪೋಷಕರು ಥಳಿಸಿದ್ದಾರೆ.
ಅತಿಥಿ ಶಿಕ್ಷಕ ಗುರುಸ್ವಾಮಿ ಜಾತಿ ತಾರತಮ್ಯ ಮಾಡುತ್ತಿದ್ದಾನೆ ಎಂದು ಆರೋಪಿಸಿ ಪೋಷಕರು ಧರ್ಮದೇಟು ಕೊಟ್ಟಿದ್ದಾರೆ. ಪ್ರಾಂಶುಪಾಲೆ ವಸಂತಕುಮಾರಿ, ನಿಲಯ ಪಾಲಕ ಮಹದೇವಪ್ಪ,ಅತಿಥಿ ಶಿಕ್ಷಕ ಗುರುಸ್ವಾಮಿಯನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಪ್ರಜ್ವಲ್ ಗೆ ಕೈದಿ ನಂಬರ್ ಕೊಟ್ಟ ಜೈಲು ಅಧಿಕಾರಿಗಳು ; ಇನ್ಮುಂದೆ ಹೀಗೆ ಬದುಕಬೇಕು!