newsics.com
ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಕನ್ನಡ ಭಾಷೆ ಬಗ್ಗೆ ಮಾತನಾಡಿ, ವಿವಾದ ಸೃಷ್ಟಿಸಿದ್ದರು. ಥಗ್ ಲೈಫ್ ಸಿನಿಮಾ ಆಡಿಯೋ ಲಾಂಚ್ ವೇಳೆ ಅವರು ಕನ್ನಡ ಹುಟ್ಟಿದ್ದೇ ತಮಿಳಿನಿಂದ ಎಂದು ಹೇಳಿದ್ದರು. ಕರ್ನಾಟಕದಲ್ಲಿ ಕಮಲ್ ವಿರುದ್ಧ ಸಾಕಷ್ಟು ಪ್ರತಿಭಟನೆಗಳು ನಡೆದವು. ಕನ್ನಡ ಪರ ಹೋರಾಟಗಾರರು, ಕನ್ನಡಿಗರು ಕಮಲ್ ವಿರುದ್ಧ ಸಿಡಿದೆದ್ದರು. ಇದೀಗ ಕಮಲ್ ಹಾಸನ್ ಅವರು ಸನಾತನ ಧರ್ಮದ ಬಗ್ಗೆ ಮಾತನಾಡಿ ಮತ್ತೆ ವಿವಾದದ ಬೆಂಕಿ ಹೊತ್ತಿಸಿದೆ.
ಕಮಲ್ ಹಾಸನ್ ಅವರು ಆಡಿರುವ ಮಾತಿಗೆ ಅವರ ರಾಜ್ಯದಲ್ಲಿಯೇ ವಿರೋಧ ವ್ಯಕ್ತವಾಗಿದೆ. ಮಾತ್ರವಲ್ಲದೆ ತಮಿಳುನಾಡಿನಲ್ಲಿ ಕಮಲ್ ಹಾಸನ್ ಅವರ ಸಿನಿಮಾಗಳಿಗೆ ನಿಷೇಧ ಹೇರುವಂತೆ ಒತ್ತಾಯ ಕೇಳಿ ಬರುತ್ತಿದೆ.ಮಕ್ಕಳ್ ನೀಧಿ ಮಯ್ಯಂ ಪಾರ್ಟಿಯ ಮುಖ್ಯಸ್ಥ ಆಗಿರುವ ಕಮಲ್ ಹಾಸನ್ ಭಾನುವಾರ ಚೆನ್ನೈನಲ್ಲಿ ಅಗರಂ ಫೌಂಡೇಶನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನ ಉದ್ದೇಶಿಸಿ ಮಾತನಾಡಿದ ಕಮಲ್ ಹಾಸನ್,ಸರಪಳಿಗಳನ್ನು ಒಡೆಯುವ ಆಯುಧ ಶಿಕ್ಷಣವೊಂದೇ, ಸರ್ವಾಧಿಕಾರಿ ಹಾಗೂ ಸನಾತನವನ್ನು ಸೋಲಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರವೇ ಇದೆ ಎಂದು ಹೇಳಿದ್ದಾರೆ.
ಇದೀಗ ತಮಿಳುನಾಡು ಬಿಜೆಪಿಯು ಕಮಲ್ ಹಾಸನ್ ಅವರ ಈ ಹೇಳಿಕೆಯನ್ನು ವಿರೋಧಿಸಿದ್ದು, ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಅಮರ್ ಪ್ರಸಾದ್ ರೆಡ್ಡಿ ಮಾತನಾಡಿ, ಕಮಲ್ ಹಾಸನ್ ಸನಾತನ ಧರ್ಮವನ್ನು ಮುಗಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಕಮಲ್ ಹಾಸನ್ ಸಿನಿಮಾಗಳಿಗೆ ನಿಷೇಧ ಹೇರಬೇಕು ಒತ್ತಾಯಿಸಿದ್ದಾರೆ.
https://www.newsics.com/2025/08/06/cloudburst-in-himachal-pradesh-more-than-400-pilgrims-rescued/