newsics.com
ತೆಲಂಗಾಣದ ಮಹಿಳೆಯೊಬ್ಬಳು ತನ್ನ ಗಂಡನನ್ನು ಅತ್ಯಂತ ಕ್ರೂರವಾಗಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಆರೋಪಿ ಮಹಿಳೆ ಯೂಟ್ಯೂಬ್ ನೋಡಿ ಈ ಕೊಲೆಗೆ ಸಂಚು ರೂಪಿಸಿದ್ದಾಳೆ ಎನ್ನುವ ವಿಚಾರ ಪೊಲೀಸ್ ವಿಚಾರಣೆ ವೇಳೆ ಗೊತ್ತಾಗಿದೆ.
ಯಾರಿಗೂ ಅನುಮಾನ ಬರಬಾರದು, ಗಂಡನ ದೇಹದಲ್ಲಿ ವಿಷದ ಅಂಶ ಸಿಗಬಾರದು ಎಂದು ಆಕೆ ಆತನ ಕಿವಿಗೆ ವಿಷ ಸುರಿದು ಕೊಲೆ ಮಾಡಿದ್ದಾಳೆ.
ಸಂಪತ್ ಮೃತಪಟ್ಟ ವ್ಯಕ್ತಿ. ಸಂಪತ್ ಗ್ರಂಥಾಲಯದಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಂಪತ್ ಮದ್ಯಪಾನ ವ್ಯಸನಿಯಾಗಿದ್ದ. ಯಾವಾಗಲೂ ಕುಡಿದು ಮನೆಗೆ ಬರುತ್ತಿದ್ದ. ಆತ ಕುಡಿದ ಅಮಲಿನಲ್ಲಿ ತನ್ನ ಪತ್ನಿ ರಮಾದೇವಿಯೊಂದಿಗೆ ಜಗಳವಾಡುತ್ತಿದ್ದ. ಅವರಿಬ್ಬರಿಗೂ ಇಬ್ಬರು ಮಕ್ಕಳಿದ್ದಾರೆ.
ತಿಂಡಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಮಾದೇವಿ ಅದೇ ಹಣದಿಂದ ಮಕ್ಕಳನ್ನು
ಪೋಷಿಸುತ್ತಿದ್ದಳು. ಆಕೆ ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ ರಮಾದೇವಿಗೆ 50 ವರ್ಷದ ಕರಣ್ ರಾಜಯ್ಯ ಎಂಬಾತನ ಭೇಟಿಯಾಗಿತ್ತು. ನಂತರ ಅವರಿಬ್ಬರ ನಡುವೆ ಅಕ್ರಮ ಸಂಬಂಧವೂ ಬೆಳೆಯಿತು.
ಆರೋಪಿ ರಮಾದೇವಿ ಯೂಟ್ಯೂಬ್ನಲ್ಲಿ ಕಿವಿಗೆ ಕೀಟನಾಶಕ ಸುರಿದು ಕೊಲ್ಲುವ ವಿಧಾನವನ್ನು ವಿವರಿಸುವ ವೀಡಿಯೊವನ್ನು ನೋಡಿದ್ದಳು. ರಮಾದೇವಿ ತನ್ನ ಪ್ರಿಯಕರ ರಾಜಯ್ಯನಿಗೆ ಈ ಭಯಾನಕ ಪ್ಲಾನ್ ಬಗ್ಗೆ ಹೇಳಿದ್ದಳು. ಆತ ಆಕೆಗೆ ಕೀಟನಾಶಕ ತಂದುಕೊಟ್ಟಿದ್ದ.
ರಮಾದೇವಿಯ ಪ್ರಿಯಕರ ಮತ್ತು ಸ್ನೇಹಿತರು ಸೇರಿ ಸಂಪತ್ಗೆ ಕುಡಿಸಿದ್ದರು. ಸಂಪತ್ ಅತಿಯಾಗಿ ಕುಡಿದು ಪ್ರಜ್ಞೆಯನ್ನೇ ಕಳೆದುಕೊಂಡಾಗ ರಮಾದೇವಿಯ ಪ್ರಿಯಕರ ರಾಜಯ್ಯ ಅವನ ಕಿವಿಗೆ ಕೀಟನಾಶಕ ಹಾಕಿದನು. ಇದರಿಂದ ಸಂಪತ್ ಸ್ಥಳದಲ್ಲೇ ಕೊನೆಯುಸಿರೆಳೆದ.
ಮರುದಿನ, ರಮಾದೇವಿ ತನ್ನ ಗಂಡನ ಬಗ್ಗೆ ಪೊಲೀಸ್ ಠಾಣೆಯಲ್ಲಿ ನಾಪತ್ತೆಯ ದೂರು ದಾಖಲಿಸಿದಳು. ಆಗಸ್ಟ್ 1ರಂದು ಸಂಪತ್ ಅವರ ಶವ ಪತ್ತೆಯಾಗಿದ್ದು, ರಮಾದೇವಿ ಮತ್ತು ರಾಜಯ್ಯ ಅವರ ಮರಣೋತ್ತರ ಪರೀಕ್ಷೆ ಮಾಡದಂತೆ ಕೇಳಿಕೊಂಡಿದ್ದರು. ಇದರಿಂದ ಪೊಲೀಸರಿಗೆ ಅನುಮಾನ ಬಂದಿತ್ತು. ಆದರೆ ರಮಾದೇವಿಯ ಮಗ ತನ್ನ ತಂದೆಯ ಸಾವನ್ನು ಅನುಮಾನಿಸಿ ತನಿಖೆಗೆ ಒತ್ತಾಯಿಸಿದ್ದ.
Health care ಬಿಗಿಯಾದ ಬ್ರಾ ಧರಿಸಿದರೆ ಸ್ತನ ಕ್ಯಾನ್ಸರ್ ಬರತ್ತಾ? ತಜ್ಞ ವೈದ್ಯರು ಹೇಳ್ತಿರೋದೇನು?
ಸ್ಫೋಟಕ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ; ಮತಗಳ್ಳತನ ಆರೋಪಕ್ಕೆ ಚುನಾವಣಾಧಿಕಾರಿ ತಿರುಗೇಟು