newsics.com
ಮಂಡ್ಯ: ಕಾವೇರಿ ನದಿಯಲ್ಲಿ ಯುವಕನೊಬ್ಬ ಕೊಚ್ಚಿ ಹೋದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಶನಿವಾರ ನಡೆದಿದೆ.
ಯುವಕ ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಪ್ರವಾಸಿಗರ ಮೊಬೈಲ್ನಲ್ಲಿ ಸೆರೆಯಾಗಿದೆ.
ಕಬಿನಿ ಹಾಗೂ ಕೆಆರ್ಎಸ್ ಜಲಾಶಯದಿಂದ ನೀರು ಬಿಡುಗಡೆ ಹಿನ್ನಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನೀರಿನ ರಭಸಕ್ಕೆ ಯುವಕ ಕೊಚ್ಚಿ ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಯುವಕನ ಬಗ್ಗೆ ಯಾವುದೇ ಮಾಹಿತಿ ಬಗ್ಗೆ ಲಭ್ಯವಾಗಿಲ್ಲ. ಪ್ರವಾಸಿಗರೊಬ್ಬರು ವಿಡಿಯೋ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊರೋನಾದಿಂದ ಭಾರತೀಯರ ಆಯಸ್ಸು ಕಡಿತ ವರದಿಗೆ ಆರೋಗ್ಯ ಇಲಾಖೆ ಹೇಳಿದ್ದೇನು..?