Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಮತಗಳವು ಆರೋಪ: ಚುನಾವಣಾ ಆಯೋಗಕ್ಕೆ ದೂರು ನೀಡದೆ ರಾಹುಲ್ ದಿಲ್ಲಿಗೆ ಮರಳಿದ್ದೇಕೆ?
ಕರ್ನಾಟಕದೇಶಪ್ರಮುಖ

ಬೆಂಗಳೂರಲ್ಲಿ ಮತಗಳವು ಆರೋಪ: ಚುನಾವಣಾ ಆಯೋಗಕ್ಕೆ ದೂರು ನೀಡದೆ ರಾಹುಲ್ ದಿಲ್ಲಿಗೆ ಮರಳಿದ್ದೇಕೆ?

Share
2 Min Read
SHARE

newsics.com

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿ ಶುಕ್ರವಾರ ಬೆಂಗಳೂರಲ್ಲಿ ಪ್ರತಿಭಟನೆ ನಡೆಸಿದರಾದರೂ ಚುನಾವಣಾ ಆಯೋಗಕ್ಕೆ ದೂರು ಕೊಡದೆ ಹಿಂತಿರುಗಿದ್ದಾರೆ.

ಗುರುವಾರ (ಆ.7) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಂಕಿ–ಸಂಖ್ಯೆ ಸಮೇತ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಇಷ್ಟಕ್ಕೆ ಸುಮ್ಮನಿರದ ರಾಹುಲ್ ಶುಕ್ರವಾರ ಬೆಂಗಳೂರಿಗೆ ಬಂದು ಚುನಾವಣೆ ಆಯೋಗ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ನೇರವಾಗಿ ಆರೋಪಿಸಿದರು. ಆದರೆ, ಮತಗಳ್ಳತನ ವಿರುದ್ಧ ಕರ್ನಾಟಕ ಚುನಾವಣೆ ಆಯೋಗಕ್ಕೆ ದೂರು ನೀಡದೇ ರಾಹುಲ್ ಗಾಂಧಿ ಹಾಗೇ ದೆಹಲಿಗೆ ಹಾರಿದ್ದಾರೆ.

ಹೀಗಾಗಿ‌ ಮೌಖಿಕ ಆರೋಪ ಮಾಡಿ ದೂರು ನೀಡದೇ ಹೋಗಿದ್ಯಾಕೆ ಎನ್ನುವ ಚರ್ಚೆಗಳು ಶುರುವಾಗಿವೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟದಲ್ಲಿ ರಾಹುಲ್ ಗಾಂಧಿ, ಕೇಂದ್ರದ ಚುನಾವಣಾ ಆಯೋಗದ ವಿರುದ್ಧ ಗುಡುಗಿದರು. ಮಹದೇವಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಮತ್ತೊಮ್ಮೆ ಸಂವಿಧಾನ ಪುಸ್ತಕ ಹಿಡಿದು ವಾಗ್ದಾಳಿ ನಡೆಸಿದರು. ಮಹದೇವಪುರ ಕ್ಷೇತ್ರದಲ್ಲಿ 5 ವಿಧಗಳಲ್ಲಿ ಮತ ಕಳ್ಳತನವಾಗಿದೆ ಎಂದು ಪುನರುಚ್ಛರಿಸಿರು.

ಹೀಗೆ ಗಂಭೀರ ಆರೋಪ ಮಾಡಿರುವ ರಾಹುಲ್ ಗಾಂಧಿ, ಪ್ರತಿಭಟನಾ ಸಮಾವೇಶ ಮುಗಿಯುತ್ತಿದ್ದಂತೆಯೇ ಕರ್ನಾಟಕ ಚುನಾವಣಾ ಆಯೋಗಕ್ಕೆ ದೂರು ನೀಡಲು ಹೋಗಲಿಲ್ಲ. ಬದಲಿಗೆ ಖಾಸಗಿ ಹೋಟೆಲ್‌ ಹಾಗೂ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಭೋಜನ ಸವಿದು ದೆಹಲಿಗೆ ಹಾರಿದ್ದಾರೆ.

ಫ್ರೀಡಂಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಈ ಕಾರ್ಯಕ್ರಮ ಮುಗಿದ ಬಳಿಕ ಚುನಾವಣಾ ಆಯೋಗ ಕಚೇರಿಗೆ ತೆರಳಿ ದೂರು ನೀಡುತ್ತೇವೆ ಎಂದಿದ್ದರು. ಆದರೆ ಯಾವುದೇ ದೂರು ನೀಡದೆ ರಾಹುಲ್ ಗಾಂಧಿ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ತೆರಳಿ ಬಳಿಕ ಅಲ್ಲಿಂದ ಖರ್ಗೆ ನಿವಾಸಕ್ಕೆ ತೆರಳಿ ಅಲ್ಲಿಂದ HLA ಏರ್ಪೋರ್ಟ್‌ನಿಂದ ದೆಹಲಿಗೆ ಹಾರಿದ್ದಾರೆ.
ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿರುವ ಚುನಾವಣೆ ಆಯೋಗ, ಮತಗಳ್ಳತನ ಆರೋಪಕ್ಕೆ ಸಾಕ್ಷ್ಯ ನೀಡಿ ತನಿಖೆ ಮಾಡುತ್ತೇವೆ ಎಂದಿದೆ. ಡಿಕ್ಲರೇಷನ್ ಗೆ ಸಹಿ ಹಾಕುವಂತೆ ರಾಹುಲ್ ಗಾಂಧಿಗೆ ತಾಕೀತು ಮಾಡಿದೆ. ಇಲ್ಲದಿದ್ರೆ ಕ್ಷಮೆ ಕೇಳಿ ಎಂದು ಆಯೋಗ ಹೇಳಿದೆ. ಇನ್ನು ಡಿಕ್ಲರೇಷನ್‌ಗೆ ಸಹಿ ಹಾಕಿದರೆ ಮುಂದೆ ಕಾನೂನಾತ್ಮಕ ಸಮಸ್ಯೆ ಸಾಧ್ಯತೆ ಇದೆ. ಕಾನೂನಿಗೆ ಹೆದರಿ ದೂರು ನೀಡಲು ರಾಹುಲ್‌ ಗಾಂಧಿ ಹಿಂದೇಟು ಹಾಕಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ನಿನ್ನೆಯೇ ರಾಹುಲ್ ಗಾಂಧಿಗೆ ಪತ್ರ ಬರೆದಿರುವ ರಾಜ್ಯ ಚುನಾವಣಾ ಮುಖ್ಯ ಆಯುಕ್ತ ಅನ್ಬುಕುಮಾರ್, ಡಿಕ್ಲೆರೇಷನ್ ಗೆ ಸಹಿ ಹಾಕಿ ದಾಖಲೆಗಳನ್ನು ನೀಡುವಂತೆ ಸೂಚಿಸಿದ್ದರು.

ಡಿಕ್ಲರೇಷನ್‌ಗೆ ಸಹಿ ಹಾಕಿದರೆ ಮುಂದೆ ಕಾನೂನಾತ್ಮಕ ಸಮಸ್ಯೆಯಾಗಲಿದೆ. ಚುನಾವಣಾ ಪಟ್ಟಿ ತಿದ್ದುಪಡಿ, ಸಿದ್ದತೆ ಅಥವಾ ಶುದ್ಧೀಕರಣ ಸಂಬಂಧ ನೀಡುವ ತಪ್ಪು ಘೋಷಣೆ ಶಿಕ್ಷಾರ್ಹವಾಗಿದೆ. 1950ರ ಪ್ರಜಾಪ್ರಭುತ್ವ ಪ್ರತಿನಿಧಿ ಕಾಯ್ದೆ ಕಲಂ 31ರಂತೆ ಗರಿಷ್ಠ ಒಂದು ವರ್ಷದವರೆಗೆ ಜೈಲುಶಿಕ್ಷೆ ವಿಧಿಸಬಹುದು. ದಂಡ ಅಥವಾ ಎರಡೂ ವಿಧಿಸಬಹುದು ಎಂದು ಅರಿತಿದ್ದೇನೆ ಎಂದು ಘೋಷಣಾ ಪತ್ರಕ್ಕೆ ಸಹಿ ಹಾಕಬೇಕು.

ನ್ಯಾಯಾಲಯ ಅಥವಾ ಅಧಿಕೃತ ದಾಖಲೆಗಳಲ್ಲಿ ಸುಳ್ಳು ಸಾಕ್ಷ್ಯ ಅಥವಾ ಪ್ರಮಾಣಪತ್ರ ನೀಡುವುದು 2023ರ ಕಲಂ 227ರಂತೆ ಶಿಕ್ಷಾರ್ಹವಾಗಿದೆ. ಇದಕ್ಕೆ ಹೆಚ್ಚು ಕಠಿಣ ಶಿಕ್ಷೆಗಳನ್ನು ವಿಧಿಸಲಾಗುತ್ತದೆ.

ಇಷ್ಟೆಲ್ಲಾ ಕಾನೂನು ಸಮಸ್ಯೆ ಇರುವ ಕಾರಣ ಮತಗಳ್ಳತನ ಆರೋಪ ಮಾಡಿರುವ ರಾಹುಲ್ ಗಾಂಧಿ ದೂರು ಸಲ್ಲಿಕೆ ವೇಳೆ ಘೋಷಣಾ ಪತ್ರಕ್ಕೆ ಸಹಿ ಹಾಕ್ತಾರಾ? ಇಲ್ಲವಾ ಎನ್ನುವುದು ಕುತೂಹಲ ಮೂಡಿಸಿದೆ.

Viral video ರೀಲ್ಸ್‌ಗಾಗಿ ಚಲಿಸುತ್ತಿದ್ದ ಥಾರ್ ಟಾಪ್ ಏರಿ ಯುವತಿ ಹುಚ್ಚಾಟ! ವೈರಲ್ ವಿಡಿಯೋ ನೋಡಿ

TAGGED:Vote theft allegations in Bengaluru: Why did Rahul return to Delhi without filing a complaint with the Election Commission?
Share This Article
Facebook Twitter Copy Link Print
Previous Article ತುಂಡುಡುಗೆ ಇದ್ರೆ ಮಾತ್ರ ಈ ರೆಸ್ಟೋರೆಂಟ್ ಗೆ ಪ್ರವೇಶ; ಚೂಡಿದಾರ್ ಧರಿಸಿದ ಮಹಿಳೆಯರಿಗೆ ನೋ ಎಂಟ್ರಿ
Next Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 09-08-2025,‌ ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?