newsics.com
ಚಿತ್ರದುರ್ಗ: ವರಮಹಾಲಕ್ಷ್ಮಿ ಹಬ್ಬದ ದಿನವೇ ಅರ್ಚಕರ ಮನೆಯಿಂದ ಚಿನ್ನಾಭರಣ ದೋಚಿರುವ ಘಟನೆ ಚಿತ್ರದುರ್ಗ ನಗರದ ವಾಸವಿ ಶಾಲೆ ಬಳಿಯ ಮನೆಯಲ್ಲಿ ನಡೆದಿದೆ.
ಇವರ ಮನೆಯ ಬೀರುವಿನಲ್ಲಿದ್ದಂತಹ 170 ಗ್ರಾಂ ಚಿನ್ನ ಹಾಗೂ 3 ಕೆ.ಜಿ ಬೆಳ್ಳಿ ಕದ್ದು ಖದೀಮರು ಪರಾರಿಯಾಗಿದ್ದಾರೆ. ಇದು ಸುಮಾರು ಅಂದಾಜು 20 ಲಕ್ಷ ಮೌಲ್ಯದ ಚಿನ್ನಾಭರಣವಾಗಿದೆ.
ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಮನೆಯಲ್ಲಿ ಹುಡುಕಾಡಿ, ಬೀರುವಿನಲ್ಲಿದ್ದಂತಹ 170 ಗ್ರಾಂ ಚಿನ್ನ ಹಾಗೂ 3 ಕೆ.ಜಿ ಬೆಳ್ಳಿ ಕಳ್ಳತನ ಮಾಡಿ, ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ಈ ಸಂಬಂಧ ಚಿತ್ರದುರ್ಗ ನಗರ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.