newsics.com
ಇಸ್ಲಾಮಾಬಾದ್: ಪೆಹಲ್ಗಾಂ ಉಗ್ರ ದಾಳಿಯಿಂದ ಭಾರತ ಕಟ್ಟುನಿಟ್ಟಿನ ಕ್ರಮ ಕೈಗೊಂಡಾಗ ಪಾಕಿಸ್ತಾನ ಪ್ರತಿಯಾಗಿ ಭಾರತದ ವಿಮಾನಗಳಿಗೆ ವಾಯುಪ್ರದೇಶ ನಿರಾಕರಿಸಿತ್ತು. ಇದರಿಂದ ಪಾಕಿಸ್ತಾನ ಕೇವಲ 2 ತಿಂಗಳಲ್ಲಿ 127 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ.
ಪೆಹಲ್ಗಾಂ ಉಗ್ರ ದಾಳಿ ಹಿಂದೆ ಪಾಕಿಸ್ತಾನದ ಕೈವಾಡ ವ್ಯಕ್ತವಾಗುತ್ತಿದ್ದಂತೆ ಭಾರತ ಕಠಿಣ ಕ್ರಮ ಕೈಗೊಂಡಿತ್ತು. ಈ ಪೈಕಿ ಸಿಂಧೂ ನದಿ ಒಪ್ಪಂದ ರದ್ದುಗೊಳಿಸಿತ್ತು. ಏಪ್ರಿಲ್ 23ರಂದು ಭಾರತ ಈ ನಿರ್ಧಾರ ಕೈಗೊಂಡಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಭಾರತದ ವಿಮಾನಗಳಿಗೆ ಪಾಕಿಸ್ತಾನದ ವಾಯುಪ್ರದೇಶ ನಿರ್ಬಂಧಿಸಿತ್ತು. ಇದರ ಪರಿಣಾಮ 127 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ.
ಏಪ್ರಿಲ್ 24 ರಿಂದ ಜೂನ್ 30ರ ಎರಡು ತಿಂಗಳ ಅವಧಿಯಲ್ಲಿ ಪಾಕಿಸ್ತಾನ 127 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ.
ಈ ಅಂಕಿ ಅಂಶಗಳನ್ನು ಪಾಕಿಸ್ತಾನ ಅಸೆಂಬ್ಲಿಯಲ್ಲಿ ಪ್ರಸ್ತುತಪಡಿಸಲಾಗಿದೆ. ಭಾರತಕ್ಕೆ ತಿರುಗೇಟು ನೀಡಲು ಬಂದ ಪಾಕಿಸ್ತಾನವೇ ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಇಂಡಸ್ ವಾಟರ್ ಒಪ್ಪಂದ ರದ್ದುಗೊಳಿಸಿರುವ ನಿರ್ಧಾರವನ್ನು ಹಿಂಪಡೆಯಲು ಪಾಕಿಸ್ತಾನ ಕೆಲ ಪ್ರಯತ್ನ ನಡೆಸಿದೆ. ಆದರೆ ಯಾವೂದೂ ಕೈಗೂಡಿಲ್ಲ. ಇಷ್ಟೇ ಅಲ್ಲ, ಕೆಲ ಪಾಕಿಸ್ತಾನ ನಾಯಕರು ಬಹಿರಂಗವಾಗಿ ಭಾರತಕ್ಕೆ ಬೆದರಿಕೆ ಹಾಕುವ ಪ್ರಯತ್ನ ಮಾಡಿದ್ದಾರೆ. ಆದರೆ ಭಾರತ ಮಾತ್ರ ತನ್ನ ನಿರ್ಧಾರದಿಂದ ಹಿಂದೆ ಸರಿದಿಲ್ಲ.
ಗುಡ್ ನ್ಯೂಸ್; ರೈಲು ಪ್ರಯಾಣಿಕರಿಗೆ ರಿಟರ್ನ್ ಟಿಕೆಟ್ ಮೇಲೆ ಭಾರಿ ರಿಯಾಯಿತಿ