newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಾವು ಭಾನುವಾರ (ಆಗಸ್ಟ್ 10)ಆಫೀಸ್ನಲ್ಲಿ ಕರ್ನಾಟಕಕ್ಕೆ ಭೇಟಿ ನೀಡುವ ಬರುವ ವಿಚಾರವನ್ನು ಕನ್ನಡದಲ್ಲೇ ಎಕ್ಸ್ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ.
ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ.
‘ಆಗಸ್ಟ್ 10 ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಲಿದ್ದೇನೆ. ಬೆಂಗಳೂರು ಮೆಟ್ರೋದ ಹಳದಿ ಮಾರ್ಗ ಉದ್ಘಾಟಿಸುತ್ತೇನೆ. ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತೇನೆ. ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುವುದಾಗಿ ಮೋದಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ನಾಳೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ;ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Aishwrya Rai Bachchan 900 ಕೋಟಿ ರೂ.ಗೆ ಒಡತಿ ಐಶ್ವರ್ಯ ರೈ; ಭಾರತದ ಎಷ್ಟನೇ ಶ್ರೀಮಂತ ನಟಿ..?
ಗುಡ್ ನ್ಯೂಸ್; ರೈಲು ಪ್ರಯಾಣಿಕರಿಗೆ ರಿಟರ್ನ್ ಟಿಕೆಟ್ ಮೇಲೆ ಭಾರಿ ರಿಯಾಯಿತಿ