newsics.com
ಬೆಂಗಳೂರು: ಹಳದಿ ಮಾರ್ಗದ ಉದ್ಘಾಟನೆಯ ನಂತರ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋದಲ್ಲಿ ಪ್ರಯಾಣಿಸಿದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಜತೆ ಮೋದಿ ಸಂವಾದ ನಡೆಸಿದರು. ಬಳಿಕ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಆಡಿಟೋರಿಯಂನಲ್ಲಿ ಮೋದಿ ಮಾತನಾಡಿದರು.
ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ನೇರವಾಗಿ ಕೌಂಟರ್ ನೀಡಿದರು. ‘ಬೆಂಗಳೂರಿಗೆ ಮೆಟ್ರೋ ತಂದಿದ್ದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು. ಮೆಟ್ರೋ ಯೋಜನೆಗಾಗಿ ರಾಜ್ಯ ಸರ್ಕಾರ ಹೆಚ್ಚು ಖರ್ಚು ಮಾಡಿದೆ. ಕೇಂದ್ರ ಸರ್ಕಾರದ ಪಾಲು 7,468.86 ಕೋಟಿ ರೂಪಾಯಿಗಳು ಮಾತ್ರವೇ ಆಗಿದ್ದರೆ, ರಾಜ್ಯ ಸರ್ಕಾರದ ಪಾಲು 25,387 ಕೋಟಿ ರೂಪಾಯಿ. ಮಹಾರಾಷ್ಟ್ರ ಮತ್ತು ಗುಜರಾತ್ಗೆ ನೀಡುವಂತೆ ಕರ್ನಾಟಕಕ್ಕೂ ಸಮಾನ ಒತ್ತು ನೀಡಿ’ ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಇದು ಕ್ರೆಡಿಟ್ ವಾರ್ಗೂ ಕಾರಣವಾಯಿತು. ಏಕೆಂದರೆ ಕಾಂಗ್ರೆಸ್ ನಾಯಕರು ಮೆಟ್ರೋ ಯೋಜನೆಯಲ್ಲಿ ರಾಜ್ಯದ ಕೊಡುಗೆಯನ್ನು ಎತ್ತಿ ತೋರಿದರು.
ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ, ‘ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜನರ ಸೇವೆಗಾಗಿಯೇ ಇರುವುದು. ದೇಶದ ಜನರಿಗಾಗಿ ನಾವು ಒಂದಾಗಿ ಕೆಲಸ ಮಾಡಬೇಕು. ಮೇಕ್ ಇನ್ ಇಂಡಿಯಾ ಯೋಜನೆಯಲ್ಲಿ ಇನ್ನಷ್ಟು ಸಾಧನೆ ಮಾಡಬೇಕು. ಅದಕ್ಕೆ ಬೆಂಗಳೂರು ಮತ್ತು ಕರ್ನಾಟಕದ ಅವಶ್ಯಕತೆ ಇದೆ. ನಮ್ಮ ವಸ್ತುಗಳು ಶೂನ್ಯ ಡಿಫೆಕ್ಟ್ ಇರದಂತೆ ತಯಾರಿಸಬೇಕು ಎಂದರು.
ಈ ಘಟನೆಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಕ್ರೆಡಿಟ್ ಯುದ್ಧವನ್ನು ಮತ್ತಷ್ಟು ತೀವ್ರಗೊಳಿಸಿದೆ. ಹಿಂದೆಯೂ ಕರ್ನಾಟಕ ಕಾಂಗ್ರೆಸ್ ನಾಯಕರು ಮೋದಿ ಸರ್ಕಾರವನ್ನು ‘ಕ್ರೆಡಿಟ್ ಚೋರಿ’ ಎಂದು ಆರೋಪಿಸಿದ್ದರು. ಆದರೆ ಮೋದಿ ಅವರ ಭಾಷಣದಲ್ಲಿ ಏಕತೆ ಮತ್ತು ಅಭಿವೃದ್ಧಿಯ ಮೇಲೆ ಒತ್ತು ನೀಡಲಾಯಿತು.
ಹಳದಿ ಮಾರ್ಗದ ಉದ್ಘಾಟನೆಯು ಬೆಂಗಳೂರಿನ ಸಂಚಾರ ಸಮಸ್ಯೆಗಳಿಗೆ ಪರಿಹಾರವಾಗಲಿದ್ದು, 19 ಕಿಲೋಮೀಟರ್ ಉದ್ದದ ಈ ಮಾರ್ಗವು ಎಲೆಕ್ಟ್ರಾನಿಕ್ ಸಿಟಿ ಮತ್ತು ಸುತ್ತಮುತ್ತಲ ಪ್ರದೇಶಗಳನ್ನು ಸಂಪರ್ಕಿಸಲಿದೆ.
ಮೋದಿ ಸಾಗುತ್ತಿದ್ದ ಮಾರ್ಗದಲ್ಲಿ ಬ್ಯಾರಿಕೇಡ್ ಹಾರಲು ಯತ್ನಿಸಿದ ಯುವಕ, ಕೆಲ ಕಾಲ ಆತಂಕ
Gold Rate Today Bangalore: ಗುಡ್ ನ್ಯೂಸ್; ಚಿನ್ನದ ಬೆಲೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ
Bevco to deliver alcohol to doorstep! ಮನೆ ಬಾಗಿಲಿಗೇ ಮದ್ಯ ಪೂರೈಸಲು ಮುಂದಾದ ಬೆವ್ಕೊ!