newsics.com
ಬೆಳಗಾವಿ: ಯುವತಿಯೊಬ್ಬಳನ್ನ ಚುಡಾಯಿಸಿದ್ದಕ್ಕೆ, ವ್ಯಕ್ತಿಯನ್ನ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಪಹರಿಸಿ ಹಲ್ಲೆ ಮಾಡಿದ ದುಷ್ಕರ್ಮಿಗಳು
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದ 39 ವರ್ಷದ ವಿಠಲ ಲಕ್ಷ್ಮಣ ನಾಯ್ಕರ್ ಎನ್ನುವ ವ್ಯಕ್ತಿಯನ್ನ ಕೆಲ ಜನರು ಬೈಕ್ ನಲ್ಲಿ ಬಂದು ಅಪಹರಣ ಮಾಡಿದ್ದಾರೆ.
ನಂತರ ಕರೆದುಕೊಂಡು ಹೋಗಿ ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು, ಗ್ಯಾಸ್ ಪೈಪ್ ಮತ್ತು ಹಗ್ಗದಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ. ಸದ್ಯ ಕಟಕೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ, ಇದಕ್ಕೆ ಪ್ರತಿಯಾಗಿ ಯುವತಿ ಚುಡಾಯಿಸಿದ ಬಗ್ಗೆ ಸಹ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ರಸ್ತೆಯಲ್ಲೇ ಶವದ ಅಂಗಾಂಗ ಪ್ರಕರಣಕ್ಕೆ ಭಾರೀ ಟ್ವಿಸ್ಟ್: ಅಳಿಯನಿಂದಲೇ ಕೃತ್ಯ!