newsics.com
ಕಲಬುರಗಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಿಲ್ಲೆಯ ಸೇಡಂ ತಾಲೂಕಿನ ಜಯತೀರ್ಥರ ಮೂಲವೃಂದಾವನ ಮಾನ್ಯಖೇಡ್ನ ಉತ್ತರಾದಿ ಮಠ ಸಂಪೂರ್ಣ ಜಲಾವೃತಗೊಂಡಿದೆ.
ಜಿಲ್ಲೆಯಾದ್ಯಂತ ಬುಧವಾರ ತಡರಾತ್ರಿ ನಿರಂತರ ಸುರಿದ ಮಳೆಯಿಂದಾಗಿ ಜಿಲ್ಲೆಯ ಸೇಡಂ ತಾಲೂಕಿನ ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು, ನದಿಯ ನೀರು ಉತ್ತರಾದಿ ಮಠಕ್ಕೆ ನುಗ್ಗಿದ ಪರಿಣಾಮವಾಗಿ ಕಾಗಿಣಾ ತಟದಲ್ಲಿನ ಜಯತೀರ್ಥರ ಮೂಲ ವೃಂದಾವನ ಸಂಪೂರ್ಣ ಜಲಾವೃತವಾಗಿದೆ.
ಉತ್ತರಾದಿ ಮಠ ಸಂಪೂರ್ಣ ಜಲಾವೃತಗೊಂಡಿದ್ದರೂ ನೀರಿನಲ್ಲೇ ನಿಂತು ಮಠದ ಅರ್ಚಕರು ದಿನನಿತ್ಯದಂತೆ ಪೂಜಾ ಕೈಂಕರ್ಯ ನೇರವೇರಿಸಿದ್ದಾರೆ.
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ